ಮೊನ್ನೆ ಡಾ. ರಾಜ್ಕುಮಾರ್ ಪುತ್ತಳಿಗೆ ಯಾರೋ ಬೆಂಕಿ ಹಚ್ಚಿ ಅವಮಾನ ಮಾಡಿದ್ದು ತುಂಬಾ ಬೇಸರ ತರಿಸಿತು. ಹಾಗೆಯೇ ರಾಜ್ ಅಭಿಮಾನಿಗಳು ಚಿಂತಿಸಬೇಕಾದ ಅವಶ್ಯಕತೆ ಸಹ ಇದೆ. ಅದೇನೆಂದರೆ ರಾಜ್ರ ಪ್ರತಿಮೆಗಳನ್ನು ಬೀದಿ ಪದಿಯಲ್ಲಿ, ಫುಟ್ಪಾತ್ ಬಳಿ ಹೀಗೆ ಎಲ್ಲೆಂದರಲ್ಲಿ ಇಡಲಾಗುತ್ತಿದೆ. ಈಗಾಗಲೇ ಅವರ ನೂರಾರು ಪ್ರತಿಮೆಗಳನ್ನು ರಾಜ್ಯಾಧ್ಯಂತ ಇರಿಸಿದ್ದು ಅವುಗಳಲ್ಲಿ ಕೆಲವೊಂದನ್ನು ಹೊರತು ಪಡಿಸಿ ಉಳಿದ ಯಾವುದಕ್ಕೂ ಸ್ವತಃ ಪ್ರತಿಮೆ ಇರಿಸಿದವರೇ ಗೌರವ ನೀಡಿದಂತೆ ಕಾಣಿಸುತ್ತಿಲ್ಲ. ಅಣ್ಣೋರಿಗೆ ನಿಜವಾದ ಗೌರವ ಸಲ್ಲಬೇಕಾದರೆ ಕಡೆ ಪಕ್ಷ ಉದ್ಯಾನಗಳಲ್ಲಿ, ಅಥವಾ ಒಳ್ಳೆಯ ಪರಿಸರದಲ್ಲಿ ಪಾಲಿಕೆಯ ಅನುಮತಿ ಪಡೆದು ಇರಿಸಬೇಕು. ಹಾದಿ ಬೀದಿಯ ಬದಿಗಳಲ್ಲಿ ಅವರ ಪ್ರತಿಮೆ ಇರಿಸಿ ಅವರಿಗೆ ಅಗೌರವ ಉಂಟು ಮಾಡುವುದು ಸರಿಯಲ್ಲ.
* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು. ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. - ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ. ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. - ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ, ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಕಾಮೆಂಟ್ಗಳು