ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾರ್ಚ್, 2015 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಬಂಡೆ ಸಾವು ಮರೆಯುವ ಮುನ್ನವೇ ಬಂದಿದೆ ಹೆಬ್ಬಂಡೆ ಸಾವಿನ ಸುದ್ದಿ !

ಹೌದು, ಕಳೆದ ವರ್ಷದ ಜನವರಿಯಲ್ಲಷ್ಟೇ ಕಲಬುರ್ಗಿಯ ಪ್ರಾಮಾಣಿಕ ಪೊಲಿಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡಿ ಎಂಬುವರು ಅನುಮಾನಾಸ್ಪದವಾಗಿ ರೌಡಿಯೊಬ್ಬನ ಗುಂಡಿಗೆ ಬಲಿಯಾಗಿದ್ದರು. ಅದರ ತನಿಖೆ ಸರಿ ಸುಮಾರಾಗಿ ಹಳ್ಳ ಹಿಡಿದೇ ಹೋಯ್ತು. ಅಷ್ಟರಲ್ಲಾಗಲೇ ಇನ್ನೊಬ್ಬ ನಿಷ್ಟಾವಂತೆ ಅಧಿಕಾರಿಯಾಗಿದ್ದ ಡಿ.ಕೆ. ರವಿಯವರು ಕೂಡಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇದು ರಾಜ್ಯಕ್ಕಾದ ದೊಡ್ಡ ನಷ್ಟವೆಂದೇ ಹೇಳಬೇಕು. ​ ಅಪ್ರತಿಮ ಪ್ರಾಮಾಣಿಕ ಅಧಿಕಾರಿಯಾಗಿದ್ದ ರವಿಯವರು ಜಿಲ್ಲಾಧಿಕಾರಿಯಾಗಿ ಕೋಲಾರಕ್ಕೆ ಸಲ್ಲಿಸಿದ ಸೇವೆ ಅಪಾರ. ಅಲ್ಲಿನ ಬಡ ಬಗ್ಗರ ನೋವಿಗೆ ಮಿಡಿದ ಅವರನ್ನು ಜನ ಎಂದೆಂದೂ ಮರೆಯಲಾರರು. ಅಲ್ಲಿನ ಮರಳು ಮಫಿಯಾವನ್ನು ಬುಡ ಸಮೇತ ಕಿತ್ತು ಹಾಕಿ ರೌಡಿಗಳ, ಕಾಳದಂಧೆ ಕೋರರ ಪಾಲಿಗೆ ಸಿಂಹ ಸ್ವಪ್ನವೇ ಆಗಿದ್ದರು. ಭೂ ಒತ್ತುವರಿದಾರರನ್ನು ಅಟ್ಟಾಡಿಸಿಕೊಂಡು ಸದೆ ಬಡಿದರು. ಇದರಿಂದ ಸಂಕಷ್ಟಕ್ಕೊಳಗಾದ ಹಲಾಲುಕೋರರು ಸಿದ್ದರಾಮಯ್ಯನವರ ಮನವೊಲಿಸಿ ರವಿಯವರನ್ನು ಕೋಲಾರದಿಂದ ಎತ್ತಂಗಡಿ ಮಾಡಿಸುವ ವ್ಯವಸ್ಥೆ ಮಾಡಿದರು. ಇದನ್ನು ತಿಳಿದ ಜಿಲ್ಲೆಯ ಜನತೆ ಜಿಲ್ಲಾಧಿಕಾರಿಯ ವರ್ಗಾವಣೆ ವಿರುದ್ದ ಬೀದಿಗಿಳಿದು ಹೋರಾಟ ಮಾಡಿದರು. ಒಬ್ಬ ಜಿಲ್ಲಾಧಿಕಾರಿಯನ್ನು ಬೇರೆಡೆಗೆ ವರ್ಗಾಯಿಸದಂತೆ ಜನರೇ ಒತ್ತಾಯಿಸಿ ಹೋರಾಟ ಮಾಡಿರುವುದು ಬಹುಶಃ ರವಿಯವರಿಗಾಗಿ ಮಾತ್ರ ಅನ್ನಿಸುತ್ತದೆ.  ಕೋಲಾರದಿಂದ ಬೆಂಗಳೂರಿಗೆ ಆದರೆ ಸಿದ್ದರಾಮಯ್ಯ ಜನರ ಬೇಡಿಕೆಗೆ ಬೆಲೆಯನ್ನೇ ಕೊಡಲಿಲ್