ವಿಷಯಕ್ಕೆ ಹೋಗಿ

ಬಂಡೆ ಸಾವು ಮರೆಯುವ ಮುನ್ನವೇ ಬಂದಿದೆ ಹೆಬ್ಬಂಡೆ ಸಾವಿನ ಸುದ್ದಿ !

ಹೌದು, ಕಳೆದ ವರ್ಷದ ಜನವರಿಯಲ್ಲಷ್ಟೇ ಕಲಬುರ್ಗಿಯ ಪ್ರಾಮಾಣಿಕ ಪೊಲಿಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡಿ ಎಂಬುವರು ಅನುಮಾನಾಸ್ಪದವಾಗಿ ರೌಡಿಯೊಬ್ಬನ ಗುಂಡಿಗೆ ಬಲಿಯಾಗಿದ್ದರು. ಅದರ ತನಿಖೆ ಸರಿ ಸುಮಾರಾಗಿ ಹಳ್ಳ ಹಿಡಿದೇ ಹೋಯ್ತು. ಅಷ್ಟರಲ್ಲಾಗಲೇ ಇನ್ನೊಬ್ಬ ನಿಷ್ಟಾವಂತೆ ಅಧಿಕಾರಿಯಾಗಿದ್ದ ಡಿ.ಕೆ. ರವಿಯವರು ಕೂಡಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇದು ರಾಜ್ಯಕ್ಕಾದ ದೊಡ್ಡ ನಷ್ಟವೆಂದೇ ಹೇಳಬೇಕು.



ಅಪ್ರತಿಮ ಪ್ರಾಮಾಣಿಕ ಅಧಿಕಾರಿಯಾಗಿದ್ದ ರವಿಯವರು ಜಿಲ್ಲಾಧಿಕಾರಿಯಾಗಿ ಕೋಲಾರಕ್ಕೆ ಸಲ್ಲಿಸಿದ ಸೇವೆ ಅಪಾರ. ಅಲ್ಲಿನ ಬಡ ಬಗ್ಗರ ನೋವಿಗೆ ಮಿಡಿದ ಅವರನ್ನು ಜನ ಎಂದೆಂದೂ ಮರೆಯಲಾರರು. ಅಲ್ಲಿನ ಮರಳು ಮಫಿಯಾವನ್ನು ಬುಡ ಸಮೇತ ಕಿತ್ತು ಹಾಕಿ ರೌಡಿಗಳ, ಕಾಳದಂಧೆ ಕೋರರ ಪಾಲಿಗೆ ಸಿಂಹ ಸ್ವಪ್ನವೇ ಆಗಿದ್ದರು. ಭೂ ಒತ್ತುವರಿದಾರರನ್ನು ಅಟ್ಟಾಡಿಸಿಕೊಂಡು ಸದೆ ಬಡಿದರು. ಇದರಿಂದ ಸಂಕಷ್ಟಕ್ಕೊಳಗಾದ ಹಲಾಲುಕೋರರು ಸಿದ್ದರಾಮಯ್ಯನವರ ಮನವೊಲಿಸಿ ರವಿಯವರನ್ನು ಕೋಲಾರದಿಂದ ಎತ್ತಂಗಡಿ ಮಾಡಿಸುವ ವ್ಯವಸ್ಥೆ ಮಾಡಿದರು. ಇದನ್ನು ತಿಳಿದ ಜಿಲ್ಲೆಯ ಜನತೆ ಜಿಲ್ಲಾಧಿಕಾರಿಯ ವರ್ಗಾವಣೆ ವಿರುದ್ದ ಬೀದಿಗಿಳಿದು ಹೋರಾಟ ಮಾಡಿದರು. ಒಬ್ಬ ಜಿಲ್ಲಾಧಿಕಾರಿಯನ್ನು ಬೇರೆಡೆಗೆ ವರ್ಗಾಯಿಸದಂತೆ ಜನರೇ ಒತ್ತಾಯಿಸಿ ಹೋರಾಟ ಮಾಡಿರುವುದು ಬಹುಶಃ ರವಿಯವರಿಗಾಗಿ ಮಾತ್ರ ಅನ್ನಿಸುತ್ತದೆ. 

ಕೋಲಾರದಿಂದ ಬೆಂಗಳೂರಿಗೆ
ಆದರೆ ಸಿದ್ದರಾಮಯ್ಯ ಜನರ ಬೇಡಿಕೆಗೆ ಬೆಲೆಯನ್ನೇ ಕೊಡಲಿಲ್ಲ. ರವಿಯವರನ್ನು ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿದರು. ಇದರಲ್ಲಿ ಸಿದ್ದರಾಮಯ್ಯನವರ ತಂತ್ರ ಎದ್ದು ಕಾಣಿಸುತ್ತಿದೆ. ಏಕೆಂದರೆ ವಾಣಿಜ್ಯ ತೆರಿಗೆ ಆಯುಕ್ತರಿಗೆ ಸಹಿ ಹಾಕುವುದು ಬಿಟ್ಟು ಹೇಳಿಕೊಳ್ಳುವಂತಹ ಕೆಲಸಗಳೇನೂ ಇರುವುದಿಲ್ಲ. ತೆರಿಗೆ ಸಂಗ್ರಹವನ್ನು ಕೆಳಗಿನ ಅಧಿಕಾರಿಗಳೇ ನೋಡಿಕೊಳ್ಳುತ್ತಾರೆ. ಹಾಗಾಗಿ ರವಿಯವರನ್ನು ಉತ್ತಮ ಹುದ್ದೆ ನೀಡುವ ಸಬೂಬಿನಲ್ಲಿ ಅವರನ್ನು ಕಟ್ಟಿ ಹಾಕುವ ಹುನ್ನಾರ ಇದರಲ್ಲಿ ಇದ್ದಿತೆಂದೇ ಹೇಳಬೇಕಾಗುತ್ತದೆ. 

ಆದರೆ ಸಿಂಹ ಯಾವ ಕಾಡಿನಲ್ಲಿದ್ದರೂ ಸಿಂಹವಾಗಿಯೇ ಘರ್ಜಿಸುತ್ತದೆ ಎಂಬುದಕ್ಕೆ ರವಿ ನಿದರ್ಶನವಾದರು. ವಾಣಿಜ್ಯ ತೆರಿಗೆಯನ್ನು ವಂಚಿಸುತ್ತಿದ್ದ ದೊಡ್ಡ ದೊಡ್ಡ ಸಂಸ್ಥೆಗಳ ಕಚೇರಿಗಳಿಗೆ ರವಿಯವರೇ ಸ್ವತಃ ದಾಳಿ ನಡೆಸ ತೊಡಗಿದರು. ಸುಳ್ಳು ಲೆಕ್ಕ ತೋರಿಸಿ ತೆರಿಗೆ ವಂಚಿಸುತ್ತಿದ್ದ ಸಂಸ್ಥೆಗಳನ್ನು ಹೆಡೆಮುರಿ ಕಟ್ಟಿ ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲಿ ಸರ್ಕಾರಕ್ಕೆ ಬರೋಬ್ಬರಿ ೧೨೫ ಕೋಟಿ ರೂಪಾಯಿಗಳನ್ನು ವಸೂಲಿ ಮಡಿ ಕೊಟ್ಟಿದ್ದರು. 

ಇದರಿಂದ ಮತ್ತೆ ಹಲಾಲುಕೋರರು ಆತಂಕಗೊಂಡಿದ್ದುದರಲ್ಲಿ ಅನುಮಾನವಿಲ್ಲ. ದುಬೈನಲ್ಲಿ ಕುಳಿತಿರುವ ಡಾನ್‌ಗಳಿಂದ ರವಿಯವರಿಗೆ ಬೆದರಿಕೆ ಕರೆಗಳನ್ನು ಮಾಡಿಸಿದ್ದರು ಎಂದೂ ಹೇಳಲಾಗುತ್ತಿದೆ. ಆದರೆ ರವಿ ಯಾವುದಕ್ಕೂ ಜಗ್ಗಿರಲಿಲ್ಲ.

ಆದರೆ ಏನಾಯ್ತು...?
ಆದರೆ ರವಿಯವರ ಜೀವನ ಧಗ್ಗನೆ ಮಿನುಗಿ ಮರೆಯಾಗಿ ಹೋದ ಮಿಂಚಿನಂತಾಗಿ ಹೋಯ್ತು. ಧಗಧಗಿಸಿ ಉರಿದ ಬೆಂಕಿ ನೋಡ ನೋಡುತ್ತಿರುವಂತೆಯೇ ಆರಿ ಹೋದಂತೆ ನಿನ್ನೆ (೧೬-೦೩-೨೦೧೫) ಅವರು ಅನುಮಾನಾಸ್ಪದ ರೀತಿಯಲ್ಲಿ ತಮ್ಮ ಅಪಾರ್ಟ್‌‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡರೂ ಅದನ್ನು ನಂಬಲಾಗುತ್ತಿಲ್ಲ. ಅಂತಹ ಎಂಟೆದೆಯ ಬಂಟನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಕಾರಣಗಳಾದರೂ ಏನಿದ್ದವು? ಅಲ್ಲದೇ ಹೈಸ್ಕೂಲು ಓದುವ ಹುಡುಗಿಯರು ಆತ್ಮಹತ್ಯೆ ಮಾಡಿಕೊಂಡರೂ ಒಂದು ಡೆತ್‌ನೋಟ್‌ ಬರೆದಿಡುತ್ತಾರೆ. ಆ ಮೂಲಕ ತಮ್ಮ ಮನೆಯವರಿಗೆ, ಆತ್ಮೀಯರಗೆ ವಿದಾಯ ಹೇಳುತ್ತಾರೆ. ಆದರೆ ರವಿಯವರ ಕೋಣೆಯಲ್ಲಿ ಯಾವ ಪತ್ರವೂ ದೊರೆತಿಲ್ಲ. ಐಎಎಸ್‌ ಅಧಿಕಾರಿಯೊಬ್ಬ ಡೆತ್‌ನೋಟ್‌ ಬರೆಯದೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂದರೆ ನಂಬಲಸಾಧ್ಯ. ಹಾಗೆಯೇ ಕೊಲೆ ನಡೆದಿದ್ದರೂ ಅವರನ್ನು ಎತ್ತಿ ನೇಣಿಗೆ ಹಾಕುವುದು ಒಬ್ಬಿಬ್ಬರಿಂದ ಆಗುವ ಕೆಲಸವೂ ಅಲ್ಲ. ಹೆಚ್ಚು ಜನರು ಸರಾಗವಾಗಿ ಒಳ ಹೋಗಿ ಬಿಡಬಹುದಾದಂತಹ ಆಪಾರ್ಟ್‌‌ಮೆಂಟ್‌ ಸಹ ಅದಲ್ಲ. ಹಾಗಿದ್ದರೆ ನಿಜಕ್ಕೂ ಏನು ನಡೆಯಿತು ? ಹೇಳೋದು ಕಷ್ಟ.

ಸರಿಯಾದ ತನಿಖೆ ಮಾತ್ರ ಇದಕ್ಕೆ ಉತ್ತರಿಸಬಲ್ಲುದು. ಪ್ರಶ್ನೆ ಇರೋದು ಅಂತಹ ತನಿಖೆ ನಡೆಯುತ್ತಾ ? ಅಥವಾ ಬಂಡೆ ಸಾವಿನಂತೆಯೇ ಈ ಹೆಬ್ಬಂಡೆಯ ಸಾವನ್ನೂ ಮುಚ್ಚಿ ಹಾಕುತ್ತಾರಾ ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...