ವಿಷಯಕ್ಕೆ ಹೋಗಿ

ಬಂಡೆ ಸಾವು ಮರೆಯುವ ಮುನ್ನವೇ ಬಂದಿದೆ ಹೆಬ್ಬಂಡೆ ಸಾವಿನ ಸುದ್ದಿ !

ಹೌದು, ಕಳೆದ ವರ್ಷದ ಜನವರಿಯಲ್ಲಷ್ಟೇ ಕಲಬುರ್ಗಿಯ ಪ್ರಾಮಾಣಿಕ ಪೊಲಿಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡಿ ಎಂಬುವರು ಅನುಮಾನಾಸ್ಪದವಾಗಿ ರೌಡಿಯೊಬ್ಬನ ಗುಂಡಿಗೆ ಬಲಿಯಾಗಿದ್ದರು. ಅದರ ತನಿಖೆ ಸರಿ ಸುಮಾರಾಗಿ ಹಳ್ಳ ಹಿಡಿದೇ ಹೋಯ್ತು. ಅಷ್ಟರಲ್ಲಾಗಲೇ ಇನ್ನೊಬ್ಬ ನಿಷ್ಟಾವಂತೆ ಅಧಿಕಾರಿಯಾಗಿದ್ದ ಡಿ.ಕೆ. ರವಿಯವರು ಕೂಡಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇದು ರಾಜ್ಯಕ್ಕಾದ ದೊಡ್ಡ ನಷ್ಟವೆಂದೇ ಹೇಳಬೇಕು.



ಅಪ್ರತಿಮ ಪ್ರಾಮಾಣಿಕ ಅಧಿಕಾರಿಯಾಗಿದ್ದ ರವಿಯವರು ಜಿಲ್ಲಾಧಿಕಾರಿಯಾಗಿ ಕೋಲಾರಕ್ಕೆ ಸಲ್ಲಿಸಿದ ಸೇವೆ ಅಪಾರ. ಅಲ್ಲಿನ ಬಡ ಬಗ್ಗರ ನೋವಿಗೆ ಮಿಡಿದ ಅವರನ್ನು ಜನ ಎಂದೆಂದೂ ಮರೆಯಲಾರರು. ಅಲ್ಲಿನ ಮರಳು ಮಫಿಯಾವನ್ನು ಬುಡ ಸಮೇತ ಕಿತ್ತು ಹಾಕಿ ರೌಡಿಗಳ, ಕಾಳದಂಧೆ ಕೋರರ ಪಾಲಿಗೆ ಸಿಂಹ ಸ್ವಪ್ನವೇ ಆಗಿದ್ದರು. ಭೂ ಒತ್ತುವರಿದಾರರನ್ನು ಅಟ್ಟಾಡಿಸಿಕೊಂಡು ಸದೆ ಬಡಿದರು. ಇದರಿಂದ ಸಂಕಷ್ಟಕ್ಕೊಳಗಾದ ಹಲಾಲುಕೋರರು ಸಿದ್ದರಾಮಯ್ಯನವರ ಮನವೊಲಿಸಿ ರವಿಯವರನ್ನು ಕೋಲಾರದಿಂದ ಎತ್ತಂಗಡಿ ಮಾಡಿಸುವ ವ್ಯವಸ್ಥೆ ಮಾಡಿದರು. ಇದನ್ನು ತಿಳಿದ ಜಿಲ್ಲೆಯ ಜನತೆ ಜಿಲ್ಲಾಧಿಕಾರಿಯ ವರ್ಗಾವಣೆ ವಿರುದ್ದ ಬೀದಿಗಿಳಿದು ಹೋರಾಟ ಮಾಡಿದರು. ಒಬ್ಬ ಜಿಲ್ಲಾಧಿಕಾರಿಯನ್ನು ಬೇರೆಡೆಗೆ ವರ್ಗಾಯಿಸದಂತೆ ಜನರೇ ಒತ್ತಾಯಿಸಿ ಹೋರಾಟ ಮಾಡಿರುವುದು ಬಹುಶಃ ರವಿಯವರಿಗಾಗಿ ಮಾತ್ರ ಅನ್ನಿಸುತ್ತದೆ. 

ಕೋಲಾರದಿಂದ ಬೆಂಗಳೂರಿಗೆ
ಆದರೆ ಸಿದ್ದರಾಮಯ್ಯ ಜನರ ಬೇಡಿಕೆಗೆ ಬೆಲೆಯನ್ನೇ ಕೊಡಲಿಲ್ಲ. ರವಿಯವರನ್ನು ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿದರು. ಇದರಲ್ಲಿ ಸಿದ್ದರಾಮಯ್ಯನವರ ತಂತ್ರ ಎದ್ದು ಕಾಣಿಸುತ್ತಿದೆ. ಏಕೆಂದರೆ ವಾಣಿಜ್ಯ ತೆರಿಗೆ ಆಯುಕ್ತರಿಗೆ ಸಹಿ ಹಾಕುವುದು ಬಿಟ್ಟು ಹೇಳಿಕೊಳ್ಳುವಂತಹ ಕೆಲಸಗಳೇನೂ ಇರುವುದಿಲ್ಲ. ತೆರಿಗೆ ಸಂಗ್ರಹವನ್ನು ಕೆಳಗಿನ ಅಧಿಕಾರಿಗಳೇ ನೋಡಿಕೊಳ್ಳುತ್ತಾರೆ. ಹಾಗಾಗಿ ರವಿಯವರನ್ನು ಉತ್ತಮ ಹುದ್ದೆ ನೀಡುವ ಸಬೂಬಿನಲ್ಲಿ ಅವರನ್ನು ಕಟ್ಟಿ ಹಾಕುವ ಹುನ್ನಾರ ಇದರಲ್ಲಿ ಇದ್ದಿತೆಂದೇ ಹೇಳಬೇಕಾಗುತ್ತದೆ. 

ಆದರೆ ಸಿಂಹ ಯಾವ ಕಾಡಿನಲ್ಲಿದ್ದರೂ ಸಿಂಹವಾಗಿಯೇ ಘರ್ಜಿಸುತ್ತದೆ ಎಂಬುದಕ್ಕೆ ರವಿ ನಿದರ್ಶನವಾದರು. ವಾಣಿಜ್ಯ ತೆರಿಗೆಯನ್ನು ವಂಚಿಸುತ್ತಿದ್ದ ದೊಡ್ಡ ದೊಡ್ಡ ಸಂಸ್ಥೆಗಳ ಕಚೇರಿಗಳಿಗೆ ರವಿಯವರೇ ಸ್ವತಃ ದಾಳಿ ನಡೆಸ ತೊಡಗಿದರು. ಸುಳ್ಳು ಲೆಕ್ಕ ತೋರಿಸಿ ತೆರಿಗೆ ವಂಚಿಸುತ್ತಿದ್ದ ಸಂಸ್ಥೆಗಳನ್ನು ಹೆಡೆಮುರಿ ಕಟ್ಟಿ ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲಿ ಸರ್ಕಾರಕ್ಕೆ ಬರೋಬ್ಬರಿ ೧೨೫ ಕೋಟಿ ರೂಪಾಯಿಗಳನ್ನು ವಸೂಲಿ ಮಡಿ ಕೊಟ್ಟಿದ್ದರು. 

ಇದರಿಂದ ಮತ್ತೆ ಹಲಾಲುಕೋರರು ಆತಂಕಗೊಂಡಿದ್ದುದರಲ್ಲಿ ಅನುಮಾನವಿಲ್ಲ. ದುಬೈನಲ್ಲಿ ಕುಳಿತಿರುವ ಡಾನ್‌ಗಳಿಂದ ರವಿಯವರಿಗೆ ಬೆದರಿಕೆ ಕರೆಗಳನ್ನು ಮಾಡಿಸಿದ್ದರು ಎಂದೂ ಹೇಳಲಾಗುತ್ತಿದೆ. ಆದರೆ ರವಿ ಯಾವುದಕ್ಕೂ ಜಗ್ಗಿರಲಿಲ್ಲ.

ಆದರೆ ಏನಾಯ್ತು...?
ಆದರೆ ರವಿಯವರ ಜೀವನ ಧಗ್ಗನೆ ಮಿನುಗಿ ಮರೆಯಾಗಿ ಹೋದ ಮಿಂಚಿನಂತಾಗಿ ಹೋಯ್ತು. ಧಗಧಗಿಸಿ ಉರಿದ ಬೆಂಕಿ ನೋಡ ನೋಡುತ್ತಿರುವಂತೆಯೇ ಆರಿ ಹೋದಂತೆ ನಿನ್ನೆ (೧೬-೦೩-೨೦೧೫) ಅವರು ಅನುಮಾನಾಸ್ಪದ ರೀತಿಯಲ್ಲಿ ತಮ್ಮ ಅಪಾರ್ಟ್‌‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡರೂ ಅದನ್ನು ನಂಬಲಾಗುತ್ತಿಲ್ಲ. ಅಂತಹ ಎಂಟೆದೆಯ ಬಂಟನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಕಾರಣಗಳಾದರೂ ಏನಿದ್ದವು? ಅಲ್ಲದೇ ಹೈಸ್ಕೂಲು ಓದುವ ಹುಡುಗಿಯರು ಆತ್ಮಹತ್ಯೆ ಮಾಡಿಕೊಂಡರೂ ಒಂದು ಡೆತ್‌ನೋಟ್‌ ಬರೆದಿಡುತ್ತಾರೆ. ಆ ಮೂಲಕ ತಮ್ಮ ಮನೆಯವರಿಗೆ, ಆತ್ಮೀಯರಗೆ ವಿದಾಯ ಹೇಳುತ್ತಾರೆ. ಆದರೆ ರವಿಯವರ ಕೋಣೆಯಲ್ಲಿ ಯಾವ ಪತ್ರವೂ ದೊರೆತಿಲ್ಲ. ಐಎಎಸ್‌ ಅಧಿಕಾರಿಯೊಬ್ಬ ಡೆತ್‌ನೋಟ್‌ ಬರೆಯದೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂದರೆ ನಂಬಲಸಾಧ್ಯ. ಹಾಗೆಯೇ ಕೊಲೆ ನಡೆದಿದ್ದರೂ ಅವರನ್ನು ಎತ್ತಿ ನೇಣಿಗೆ ಹಾಕುವುದು ಒಬ್ಬಿಬ್ಬರಿಂದ ಆಗುವ ಕೆಲಸವೂ ಅಲ್ಲ. ಹೆಚ್ಚು ಜನರು ಸರಾಗವಾಗಿ ಒಳ ಹೋಗಿ ಬಿಡಬಹುದಾದಂತಹ ಆಪಾರ್ಟ್‌‌ಮೆಂಟ್‌ ಸಹ ಅದಲ್ಲ. ಹಾಗಿದ್ದರೆ ನಿಜಕ್ಕೂ ಏನು ನಡೆಯಿತು ? ಹೇಳೋದು ಕಷ್ಟ.

ಸರಿಯಾದ ತನಿಖೆ ಮಾತ್ರ ಇದಕ್ಕೆ ಉತ್ತರಿಸಬಲ್ಲುದು. ಪ್ರಶ್ನೆ ಇರೋದು ಅಂತಹ ತನಿಖೆ ನಡೆಯುತ್ತಾ ? ಅಥವಾ ಬಂಡೆ ಸಾವಿನಂತೆಯೇ ಈ ಹೆಬ್ಬಂಡೆಯ ಸಾವನ್ನೂ ಮುಚ್ಚಿ ಹಾಕುತ್ತಾರಾ ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.