ವಿಷಯಕ್ಕೆ ಹೋಗಿ

ನೆಟ್ಟಕಲ್ಲಪ್ಪ ವೃತ್ತದ ಬಳಿ ಅಣ್ಣೋರನ್ನು ನೋಡಿದ್ದು



ಅದು ನಾನು ಬೆಂಗಳೂರಿಗೆ ಬಂದ ಹೊಸತು. ಬಸವನಗುಡಿ ನೆಟ್ಟಕಲ್ಲಪ್ಪ ವೃತ್ತದ ಬಳಿಯಿದ್ದ 'ನಾಸಾ ಪ್ರಕಾಶನ'ದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದೆ. ಅವತ್ತು ಏನೋ ಕೆಲಸದ ಮೇಲೆ ನನ್ನನ್ನು ಬೇರೆ ಕಚೇರಿಗೆ ಕಳಿಸುವ ಸಲುವಾಗಿ ಮಾಲೀಕರು ಬೇಗನೇ ಬರಲು ತಿಳಿಸಿದ್ದರು. ಕುಂಬಳಗೋಡು ಪೆಪ್ಸಿ ಕಂಪನಿ ಬಳಿಯಿಂದ ಏಳು ಗಂಟೆಗೆಲ್ಲಾ ಹೊರಟು ಬೇಗನೆ ಬಂದು ಬಿಟ್ಟೆ. ನೆಟ್ಟಕಲ್ಲಪ್ಪ ವೃತ್ತದ ಬಳಿ ಬಸ್‌ ಬಂದಾಗ ಅಲ್ಲಿನ ಗಣಪತಿ ದೇವಸ್ಥಾನದ ಬಳಿ ಚಿತ್ರೀಕರಣವೊಂದು ನಡೆಯುತ್ತಿರುವುದು ಕಾಣಿಸಿತು. ಅಷ್ಟೇನೂ ಸಮಯವಾಗದ್ದರಿಂದ ಬಸ್‌ ಇಳಿದು ಅಲ್ಲಿ ಹೋದೆ.

ಅದು ಶಿವರಾಜ್‌ಕುಮಾರ್‌ ನಟನೆಯ ಒಂದು ಹೊಸ ಚಿತ್ರದ ಮುಹೂರ್ತದ ಕಾರ್ಯಕ್ರಮ ಅಂತ ತಿಳಿಯಿತು. ಕೆಳಗೆಲ್ಲಾ ಕಾರ್ಪೆಟ್ ಹಾಕಿ, ಹೂವುಗಳಿಂದ ಇಡೀ ದೇವಾಲಯವನ್ನೂ ಅಲಂಕರಿಸಿದ್ದರು. ಆಗಿನ್ನೂ ಬೆಳಗಿನ ಏಳೂವರೆ-ಎಂಟರ ಸಮಯವಾದ್ದರಿಂದ ಅಷ್ಟೇನೂ ಜನರಿರಲಿಲ್ಲ. ನಾನು ಒಂದು ಬದಿಯಲ್ಲಿ ನಿಂತು ಶಿವರಾಜ್‌ ಕುಮಾರ್‌ ಅವರನ್ನು ನೋಡತೊಡಗಿದೆ. ಅವರಿಗೆ ಮಹಾರಾಜರ ವೇಶ ತೊಡಿಸಿದ್ದರು. 

ಆಗ ಒಬ್ಬೊಬ್ಬರೇ ಚಿತ್ರರಂಗದ ಗಣ್ಯರು ಬರತೊಡಗಿದರು. ಯಾರೋ ಒಬ್ಬ ಗಣ್ಯರು ಬಂದಾಗ ಅದುವರೆಗೂ ದೇವಾಲಯದ ಒಳಗಿದ್ದ ಒಬ್ಬರು ಕೈ ಮುಗಿಯುತ್ತಾ ಹೊರ ಬಂದರು. ಅವರನ್ನು ನೋಡಿ ನನಗೆ ರೋಮಾಂಚನವಾಗಿ ಹೋಯ್ತು. ಕಾರಣ ಹಾಗೆ ಬಂದ ವ್ಯಕ್ತಿ ರಾಜ್‌ಕುಮಾರ್‌ ಆಗಿದ್ದರು. ಬಾಲ್ಯದಿಂದಲೂ ಅವರ ಅಭಿಮಾನಿಯಾಗಿ ಬೆಳೆದ ನನಗೆ ಈ ಭೇಟಿ ಅನಿರೀಕ್ಷಿತವೇ ಆಗಿತ್ತು. ಮೂಖವಾಗಿ ಅವರನ್ನೇ ಕಣ್ತುಂಬಿಕೊಂಡೆ. ಬಿಳಿ ಪಂಚೆ, ಬಿಳಿ ಅಂಗಿ, ಕೈಲೊಂದು ಕೈಗಡಿಯಾರ! ಅವರು ನನ್ನ ಎದುರಲ್ಲೇ ನನ್ನನ್ನೂ ನೋಡಿ ಆತ್ಮೀಯ ಸ್ನೇಹಿತರನ್ನು ನೋಡಿದಾಗ ಕಿರುನಗುತ್ತೇವಲ್ಲ ಹಾಗೆ ಮುಗುಳ್ನಗುತ್ತಾ, ನನಗೂ ಸೇರಿಸಿ ಎಲ್ಲರಿಗೂ ಕೈ ಮುಗಿಯುತ್ತಾ ನನ್ನ ಎದುರಿಂದಲೇ ಹಾದು ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಹೋದರು. ಆ ಸಮಯದಲ್ಲಿ ಅವರಿಗೆ ಪ್ರತಿಯಾಗಿ ಕೈಮುಗಿಯುವ ಜ್ಞಾನವೂ ನನಗೆ ಬರಲೇ ಇಲ್ಲ. ಸುಮ್ಮನೇ ನಿಂತುಬಿಟ್ಟಿದ್ದೆ. ಎಷ್ಟೋ ಹೊತ್ತು ಹಾಗೆಯೇ ನಿಂತು ಅವರನ್ನು ನೋಡಿದೆ.
ಕೊನೆಗೆ ಶಿವರಾಜ್‌ಕುಮಾರ್‌ ಕುದುರೆಯೇರಿ ಬರುವ ದೃಶ್ಯಕ್ಕೆ ಅಣ್ಣವರು ಕ್ಲಾಪ್‌ ಮಾಡಿದರು. ಅಷ್‌ಅರಲ್ಲಿ ನನಗೆ ಸಮಯವಾದ್ದರಿಂದ ನಮ್ಮ ಕಚೇರಿ ಕಡೆಗೆ ಹೊರಟೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...