ವಿಷಯಕ್ಕೆ ಹೋಗಿ

ನೆಟ್ಟಕಲ್ಲಪ್ಪ ವೃತ್ತದ ಬಳಿ ಅಣ್ಣೋರನ್ನು ನೋಡಿದ್ದು



ಅದು ನಾನು ಬೆಂಗಳೂರಿಗೆ ಬಂದ ಹೊಸತು. ಬಸವನಗುಡಿ ನೆಟ್ಟಕಲ್ಲಪ್ಪ ವೃತ್ತದ ಬಳಿಯಿದ್ದ 'ನಾಸಾ ಪ್ರಕಾಶನ'ದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದೆ. ಅವತ್ತು ಏನೋ ಕೆಲಸದ ಮೇಲೆ ನನ್ನನ್ನು ಬೇರೆ ಕಚೇರಿಗೆ ಕಳಿಸುವ ಸಲುವಾಗಿ ಮಾಲೀಕರು ಬೇಗನೇ ಬರಲು ತಿಳಿಸಿದ್ದರು. ಕುಂಬಳಗೋಡು ಪೆಪ್ಸಿ ಕಂಪನಿ ಬಳಿಯಿಂದ ಏಳು ಗಂಟೆಗೆಲ್ಲಾ ಹೊರಟು ಬೇಗನೆ ಬಂದು ಬಿಟ್ಟೆ. ನೆಟ್ಟಕಲ್ಲಪ್ಪ ವೃತ್ತದ ಬಳಿ ಬಸ್‌ ಬಂದಾಗ ಅಲ್ಲಿನ ಗಣಪತಿ ದೇವಸ್ಥಾನದ ಬಳಿ ಚಿತ್ರೀಕರಣವೊಂದು ನಡೆಯುತ್ತಿರುವುದು ಕಾಣಿಸಿತು. ಅಷ್ಟೇನೂ ಸಮಯವಾಗದ್ದರಿಂದ ಬಸ್‌ ಇಳಿದು ಅಲ್ಲಿ ಹೋದೆ.

ಅದು ಶಿವರಾಜ್‌ಕುಮಾರ್‌ ನಟನೆಯ ಒಂದು ಹೊಸ ಚಿತ್ರದ ಮುಹೂರ್ತದ ಕಾರ್ಯಕ್ರಮ ಅಂತ ತಿಳಿಯಿತು. ಕೆಳಗೆಲ್ಲಾ ಕಾರ್ಪೆಟ್ ಹಾಕಿ, ಹೂವುಗಳಿಂದ ಇಡೀ ದೇವಾಲಯವನ್ನೂ ಅಲಂಕರಿಸಿದ್ದರು. ಆಗಿನ್ನೂ ಬೆಳಗಿನ ಏಳೂವರೆ-ಎಂಟರ ಸಮಯವಾದ್ದರಿಂದ ಅಷ್ಟೇನೂ ಜನರಿರಲಿಲ್ಲ. ನಾನು ಒಂದು ಬದಿಯಲ್ಲಿ ನಿಂತು ಶಿವರಾಜ್‌ ಕುಮಾರ್‌ ಅವರನ್ನು ನೋಡತೊಡಗಿದೆ. ಅವರಿಗೆ ಮಹಾರಾಜರ ವೇಶ ತೊಡಿಸಿದ್ದರು. 

ಆಗ ಒಬ್ಬೊಬ್ಬರೇ ಚಿತ್ರರಂಗದ ಗಣ್ಯರು ಬರತೊಡಗಿದರು. ಯಾರೋ ಒಬ್ಬ ಗಣ್ಯರು ಬಂದಾಗ ಅದುವರೆಗೂ ದೇವಾಲಯದ ಒಳಗಿದ್ದ ಒಬ್ಬರು ಕೈ ಮುಗಿಯುತ್ತಾ ಹೊರ ಬಂದರು. ಅವರನ್ನು ನೋಡಿ ನನಗೆ ರೋಮಾಂಚನವಾಗಿ ಹೋಯ್ತು. ಕಾರಣ ಹಾಗೆ ಬಂದ ವ್ಯಕ್ತಿ ರಾಜ್‌ಕುಮಾರ್‌ ಆಗಿದ್ದರು. ಬಾಲ್ಯದಿಂದಲೂ ಅವರ ಅಭಿಮಾನಿಯಾಗಿ ಬೆಳೆದ ನನಗೆ ಈ ಭೇಟಿ ಅನಿರೀಕ್ಷಿತವೇ ಆಗಿತ್ತು. ಮೂಖವಾಗಿ ಅವರನ್ನೇ ಕಣ್ತುಂಬಿಕೊಂಡೆ. ಬಿಳಿ ಪಂಚೆ, ಬಿಳಿ ಅಂಗಿ, ಕೈಲೊಂದು ಕೈಗಡಿಯಾರ! ಅವರು ನನ್ನ ಎದುರಲ್ಲೇ ನನ್ನನ್ನೂ ನೋಡಿ ಆತ್ಮೀಯ ಸ್ನೇಹಿತರನ್ನು ನೋಡಿದಾಗ ಕಿರುನಗುತ್ತೇವಲ್ಲ ಹಾಗೆ ಮುಗುಳ್ನಗುತ್ತಾ, ನನಗೂ ಸೇರಿಸಿ ಎಲ್ಲರಿಗೂ ಕೈ ಮುಗಿಯುತ್ತಾ ನನ್ನ ಎದುರಿಂದಲೇ ಹಾದು ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಹೋದರು. ಆ ಸಮಯದಲ್ಲಿ ಅವರಿಗೆ ಪ್ರತಿಯಾಗಿ ಕೈಮುಗಿಯುವ ಜ್ಞಾನವೂ ನನಗೆ ಬರಲೇ ಇಲ್ಲ. ಸುಮ್ಮನೇ ನಿಂತುಬಿಟ್ಟಿದ್ದೆ. ಎಷ್ಟೋ ಹೊತ್ತು ಹಾಗೆಯೇ ನಿಂತು ಅವರನ್ನು ನೋಡಿದೆ.
ಕೊನೆಗೆ ಶಿವರಾಜ್‌ಕುಮಾರ್‌ ಕುದುರೆಯೇರಿ ಬರುವ ದೃಶ್ಯಕ್ಕೆ ಅಣ್ಣವರು ಕ್ಲಾಪ್‌ ಮಾಡಿದರು. ಅಷ್‌ಅರಲ್ಲಿ ನನಗೆ ಸಮಯವಾದ್ದರಿಂದ ನಮ್ಮ ಕಚೇರಿ ಕಡೆಗೆ ಹೊರಟೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...