ವಿಷಯಕ್ಕೆ ಹೋಗಿ

ಕಪ್ಪುರಂಧ್ರದ ಹಿಡಿತದಲ್ಲಿ ಹಾಲಿನ ಸಮುದ್ರ !



ನಮ್ಮ ಗೆಲಾಕ್ಸಿಯ (ಹಾಲಿನ ಸಮುದ್ರ) ನಡುವಲ್ಲಿಯೂ ಇಂತಹ ಕಪ್ಪುರಂದ್ರವಿದೆಯಂತೆ. ಅದರ ಸೆಳೆತಕ್ಕೆ ಸೂರ್ಯನೂ ಸೇರಿದಂತೆ ಈ ಗೆಲಾಕ್ಸಿಯ ಎಲ್ಲಾ ನಕ್ಷತ್ರಗಳೂ ಸಿಲುಕಿ ನಿಧಾನವಾಗಿ ಅದರತ್ತ ಚಲಿಸುತ್ತಿವೆ. ಚಿತ್ರದಲ್ಲಿ ನೋಡಿದರೆ ನಮ್ಮ ಗೆಲಾಕ್ಸಿಯ ಎಲ್ಲಾ ನಕ್ಷತ್ರಗಳೂ ಕೇಂದ್ರದತ್ತ ಸೇಳೆಯಲ್ಪಟ್ಟಿರುವುದು ಕಾಣಿಸುತ್ತದೆ. ಆದರೆ ಆ ನಿಧಾನವೆಂಬುದು ನಮ್ಮ ಊಹೆಗೂ ನಿಲುಕದ ವೇಗವೇ ಆಗಿದೆ. ಈಗಾಗಲೇ ಸೂರ್ಯನು ಅರ್ಧ ಗೆಲಾಕ್ಸಿ ದೂರವನ್ನು ಕ್ರಮಿಸಿಯಾಗಿದೆ. ಅಂದರೆ ಮುಂದೊಂದು ದಿನ ಮನುಷ್ಯರು ಕಪ್ಪು ರಂದ್ರದ ಒಳಗೆ ಹೋಗಿ ಬೀಳಬಾರದು ಅಂದರೆ ಸೂರ್ಯ ಅದರತ್ತ ಹೊರಟಿರುವ ವೇಗಕ್ಕಿಂತಲೂ ಹೆಚ್ಚಿನ ವೇಗದಲ್ಲಿ ಕಪ್ಪು ರಂದ್ರದ ವಿರುದ್ದ ದಿಕ್ಕಿಗೆ ಹೋಗಬೇಕು. ಆದರೆ ಅಂತಹ ಅಘಾಧ ವೇಗವನ್ನು ಸಾಧಿಸುವುದು ಕಷ್ಟ. ಹಾಗಾಗಿ ಮುಂದೊಂದು ದಿನ ಭೂಮಿಯೂ ಸೇರಿದಂತೆ ಎಲ್ಲಾ ಗ್ರಹ ನಕ್ಞತ್ರಗಳೂ ಆ ಕಪ್ಪು ರಂದ್ರದಲ್ಲಿ ಬಿದ್ದು ಸಾಯುತ್ತವೆ. ಅದರಿಂದ ತಪ್ಪಿಸಿಕೊಳ್ಳುವುದು ಅಸಾಧ್ಯ. 

ಒಂದೇ ಸಮಾಧಾನವೆಂದರೆ ಅದು ನಮ್ಮಿಂದ ಸಾವಿರಾರು ಬೆಳಕಿನ ವರ್ಷದಷ್ಟು ದೂರವಿರುವುದರಿಂದ ಸೂರ್ಯ ಅದರ ಬಳಿ ತಲುಪಲು ಇನ್ನೂ ಎಷ್ಟೋ ಲಕ್ಷ ವರ್ಷಗಳೇ ಬೇಕಾಗಬಹುದು.

ಮೊದಲಿಗೆ ಇದೇ ಗೆಲಾಕ್ಸಿಯ ಕೊನೆಯಲ್ಲಿರುವ ನಕ್ಷತ್ರಗಳ ಗ್ರಹಗಳಲ್ಲಿ ಸೂಕ್ತವಾದುದನ್ನು ಹುಡುಕಿ ಅಲ್ಲಿಗೆ ಹೋಗಬೇಕು. (ಅದು ಸಾಧ್ಯವಾಗಲು ಎಷ್ಟು ಸಾವಿರ ವರ್ಷ ಬೇಕೋ ಗೊತ್ತಿಲ್ಲ). ಆ ನಂತರ ಬೇರೆ ಗೆಲಾಕ್ಸಿಗೆ ಹಾರಲು ಪ್ರಯತ್ನಿಸಬೇಕು. ಆದರೆ ಇತ್ತೀಚಿನ ಸಂಶೋಧನೆ ಪ್ರಕಾರ ಎಲ್ಲಾ ಗೆಲಾಕ್ಸಿಗಳೂ ದೂರ ದೂರವಾಗುತ್ತಿವೆ. ಹಾಗಾದಾಗ ಮತ್ತೊಂದು ಗೆಲಾಕ್ಸಿಗೆ ಹಾರುವುದು ಸಾಧ್ಯವಿಲ್ಲ. ಆಗ ನಮ್ಮದೇ ಗೆಲಾಕ್ಸಿಯ ಕಪ್ಪು ರಂಧ್ರದಿಂದ ಉಂಟಾಗುವ ಹೊಸ ನಕ್ಷತ್ರಗಳ ಗ್ರಹಗಳನ್ನು ಹುಡುಕಬೇಕು. ಅದೆಲ್ಲಾ ಸಾಧ್ಯವಾಗುತ್ತಾ ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...