ವಿಷಯಕ್ಕೆ ಹೋಗಿ

ಕಪ್ಪುರಂಧ್ರದ ಹಿಡಿತದಲ್ಲಿ ಹಾಲಿನ ಸಮುದ್ರ !



ನಮ್ಮ ಗೆಲಾಕ್ಸಿಯ (ಹಾಲಿನ ಸಮುದ್ರ) ನಡುವಲ್ಲಿಯೂ ಇಂತಹ ಕಪ್ಪುರಂದ್ರವಿದೆಯಂತೆ. ಅದರ ಸೆಳೆತಕ್ಕೆ ಸೂರ್ಯನೂ ಸೇರಿದಂತೆ ಈ ಗೆಲಾಕ್ಸಿಯ ಎಲ್ಲಾ ನಕ್ಷತ್ರಗಳೂ ಸಿಲುಕಿ ನಿಧಾನವಾಗಿ ಅದರತ್ತ ಚಲಿಸುತ್ತಿವೆ. ಚಿತ್ರದಲ್ಲಿ ನೋಡಿದರೆ ನಮ್ಮ ಗೆಲಾಕ್ಸಿಯ ಎಲ್ಲಾ ನಕ್ಷತ್ರಗಳೂ ಕೇಂದ್ರದತ್ತ ಸೇಳೆಯಲ್ಪಟ್ಟಿರುವುದು ಕಾಣಿಸುತ್ತದೆ. ಆದರೆ ಆ ನಿಧಾನವೆಂಬುದು ನಮ್ಮ ಊಹೆಗೂ ನಿಲುಕದ ವೇಗವೇ ಆಗಿದೆ. ಈಗಾಗಲೇ ಸೂರ್ಯನು ಅರ್ಧ ಗೆಲಾಕ್ಸಿ ದೂರವನ್ನು ಕ್ರಮಿಸಿಯಾಗಿದೆ. ಅಂದರೆ ಮುಂದೊಂದು ದಿನ ಮನುಷ್ಯರು ಕಪ್ಪು ರಂದ್ರದ ಒಳಗೆ ಹೋಗಿ ಬೀಳಬಾರದು ಅಂದರೆ ಸೂರ್ಯ ಅದರತ್ತ ಹೊರಟಿರುವ ವೇಗಕ್ಕಿಂತಲೂ ಹೆಚ್ಚಿನ ವೇಗದಲ್ಲಿ ಕಪ್ಪು ರಂದ್ರದ ವಿರುದ್ದ ದಿಕ್ಕಿಗೆ ಹೋಗಬೇಕು. ಆದರೆ ಅಂತಹ ಅಘಾಧ ವೇಗವನ್ನು ಸಾಧಿಸುವುದು ಕಷ್ಟ. ಹಾಗಾಗಿ ಮುಂದೊಂದು ದಿನ ಭೂಮಿಯೂ ಸೇರಿದಂತೆ ಎಲ್ಲಾ ಗ್ರಹ ನಕ್ಞತ್ರಗಳೂ ಆ ಕಪ್ಪು ರಂದ್ರದಲ್ಲಿ ಬಿದ್ದು ಸಾಯುತ್ತವೆ. ಅದರಿಂದ ತಪ್ಪಿಸಿಕೊಳ್ಳುವುದು ಅಸಾಧ್ಯ. 

ಒಂದೇ ಸಮಾಧಾನವೆಂದರೆ ಅದು ನಮ್ಮಿಂದ ಸಾವಿರಾರು ಬೆಳಕಿನ ವರ್ಷದಷ್ಟು ದೂರವಿರುವುದರಿಂದ ಸೂರ್ಯ ಅದರ ಬಳಿ ತಲುಪಲು ಇನ್ನೂ ಎಷ್ಟೋ ಲಕ್ಷ ವರ್ಷಗಳೇ ಬೇಕಾಗಬಹುದು.

ಮೊದಲಿಗೆ ಇದೇ ಗೆಲಾಕ್ಸಿಯ ಕೊನೆಯಲ್ಲಿರುವ ನಕ್ಷತ್ರಗಳ ಗ್ರಹಗಳಲ್ಲಿ ಸೂಕ್ತವಾದುದನ್ನು ಹುಡುಕಿ ಅಲ್ಲಿಗೆ ಹೋಗಬೇಕು. (ಅದು ಸಾಧ್ಯವಾಗಲು ಎಷ್ಟು ಸಾವಿರ ವರ್ಷ ಬೇಕೋ ಗೊತ್ತಿಲ್ಲ). ಆ ನಂತರ ಬೇರೆ ಗೆಲಾಕ್ಸಿಗೆ ಹಾರಲು ಪ್ರಯತ್ನಿಸಬೇಕು. ಆದರೆ ಇತ್ತೀಚಿನ ಸಂಶೋಧನೆ ಪ್ರಕಾರ ಎಲ್ಲಾ ಗೆಲಾಕ್ಸಿಗಳೂ ದೂರ ದೂರವಾಗುತ್ತಿವೆ. ಹಾಗಾದಾಗ ಮತ್ತೊಂದು ಗೆಲಾಕ್ಸಿಗೆ ಹಾರುವುದು ಸಾಧ್ಯವಿಲ್ಲ. ಆಗ ನಮ್ಮದೇ ಗೆಲಾಕ್ಸಿಯ ಕಪ್ಪು ರಂಧ್ರದಿಂದ ಉಂಟಾಗುವ ಹೊಸ ನಕ್ಷತ್ರಗಳ ಗ್ರಹಗಳನ್ನು ಹುಡುಕಬೇಕು. ಅದೆಲ್ಲಾ ಸಾಧ್ಯವಾಗುತ್ತಾ ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...