ಒಂದು ಪತ್ರಿಕೆಯನ್ನು ನಡೆಸುವುದು ಎಷ್ಟು ಕಷ್ಟ ಅನ್ನೋದು ನನ್ನನ್ನೂ ಸೇರಿದಂತೆ ಕೈ ಸುಟ್ಟುಕೊಂಡ ಎಲ್ಲರಿಗೂ ಗೊತ್ತು. ಆದರೂ ಗೆಳೆಯ ಗಣೇಶ್ ಕೋಡೂರು ಛಲ ಬಿಡದ ತ್ರಿವಿಕ್ರಮನಂತೆ "ನಿಮ್ಮೆಲ್ಲರ ಮಾನಸ" ತಿಂಗಳ ಪತ್ರಿಕೆಯನ್ನು ನೂರು ಸಂಚಿಕೆಯ ಗಡಿ ದಾಟಿಸಿದ್ದು ಮೆಚ್ಚುವ ಕೆಲಸ. ಈ ಶುಭ ಸಂದರ್ಭದಲ್ಲಿ ಗಣೇಶ್ ಇಂದು ಒಂದು ಸಣ್ಣ ಕಾರ್ಯಕ್ರಮವನ್ನೂ ಇಟ್ಟುಕೊಂಡಿದ್ದರು. ಅವರ ಪತ್ರಿಕೆಯ ಓದುಗ ಮಿತ್ರರು ದೂರದೂರುಗಳಿಂದೆಲ್ಲಾ ಬಂದು ಸೇರಿದ್ದು ಎಲ್ಲರಿಗೂ ಕುಶಿ ನೀಡಿತು. ಹಾಗೆಯೇ ಇಂದು ಗಣೇಶ್ ತುಂಬಾ ಭಾವುಕರಾಗಿದ್ದರು. ಅದಕ್ಕೆ ಕಾರಣ ತಾನಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿಗಿಂತಲೂ ಹೆಚ್ಚಾಗಿ ಇಷ್ಟು ಸಾಧಿಸಲು ಎಷ್ಟು ಕಷ್ಟ ಪಡಬೇಕಾಯ್ತು ಅನ್ನೋದು ಅವರ ಮಾತುಗಳಿಂದಲೇ ತಿಳಿಯುತ್ತಿತ್ತು. ಅವರ ಮಾತು ಕೇಳುತ್ತಾ ನನ್ನ ಕಣ್ಣು ಸಹ ತೇವಗೊಂಡದ್ದು ಸುಳ್ಳಲ್ಲ. ಕಾರಣ ಗಣೇಶ್ ಕೋಡೂರು ಹೆಸರು ನಾನು ಮೊದಲಿಗೆ ನೋಡಿದ್ದು ತರಂಗದಲ್ಲಿ ಅವರ ಒಂದು ಕಥೆಯನ್ನು ನೋಡಿದಾಗ. ಮುಖತಃ ಭೇಟಿಯಾಗಿದ್ದು "ಪ್ರೇಮ ಸಾಮ್ರಾಜ್ಯ" ಎಂಬ ಪತ್ರಿಕೆಯ ಕಚೇರಿಯಲ್ಲಿ. ಹೊಟ್ಟೆ ಪಾಡಿಗಾಗಿ ನಾನು ಆ ಪತ್ರಿಕೆಗೂ ಲೇಖನ ಬರೆದು ಕೊಡಲು ಹೋದಾಗ ಅಲ್ಲಿ ಅದೇ ಕಾರಣಕ್ಕೆ ಬರೆಯುತ್ತಿದ್ದ ಗಣೇಶ್ ಇದ್ದರು. ಅದರ ಹಿಂದಿನ ಸಂಚಿಕೆಗೆ ನಾನು ಕೊಟ್ಟಿದ್ದ "ಸವಿ ನೆನಪುಗಳು ಬೇಕು" ಕತೆಯನ್ನು ಓದಿದ್ದ ಗಣೇಶ್ "ಅಷ್ಟೊಳ್ಳೆ ಕತೆಯನ್ನು ಯಾಕೆ ಈ ಪತ್
ಮನಸು ಹೃದಯಗಳ ಸವಿಮಾತು............