ವಿಷಯಕ್ಕೆ ಹೋಗಿ

ರೈತರ ಆತ್ಮಹತ್ಯೆಗೆ ಕಾರಣ ಹುಡುಕುತ್ತಾ...



ಕಳೆದ ಏಳು ತಿಂಗಳಲ್ಲಿ ೫೧೬ ರೈತರು ನಮ್ಮ ರಾಜ್ಯವೊಂದರಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರಂತೆ. ಇದೊಂದು ಗಾಬರಿ ಹುಟ್ಟಿಸುವ ಸುದ್ದಿಯೇ ಹೌದು. ಹೀಗೆ ಏಕಾಏಕಿ ಇಷ್ಟೊಂದು ಸಂಖ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾದರೂ ಏನು ? ನಿಜವಾದ ಸಾಲದ ಸಮಸ್ಯೆಯೇ ಇದಕ್ಕೆ ಕಾರಣವೇ ? ಅಷ್ಟೊಂದು ಸಾಲವನ್ನಾದರೂ ಯತಕ್ಕಾಗಿ ಮಾಡಿಕೊಂಡರು ? ಬರಗಾಲ ಕಾರಣವೆನ್ನಲು ಈಗಿನದಕ್ಕಿಂತಲೂ ಭೀಕರ ಬರಗಾಲ ಎಷ್ಟೋ ಸಮಯ ಬಂದು ಹೋಗಿದೆ. ಆಗೆಲ್ಲಾ ಈ ರೀತಿ ರೈತರು ಆತ್ಮಹತ್ಯೆಗೆ ಇಳಿಯುತ್ತಿರಲಿಲ್ಲ. ಆದರೆ ಇತ್ತೀಚಿಗೆ ಏನೋ ಯಡವಟ್ಟಾಗುತ್ತಿರುವುದಂತೂ ನಿಜ.

ನಿನ್ನೆಯ ಪತ್ರಿಕೆಗಳಲ್ಲಿ ಉತ್ತರ ಕರ್ನಾಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಹೆಂಡತಿಯ ಹೇಳಿಕೆಗಳು ಪ್ರಕಟವಾಗಿದೆ. (ಅವರ ಮನೆಗೆ ರಾಹುಲ್‌ಗಾಂಧಿ ಭೇಟಿ ನೀಡುವುದಿದೆಯಂತೆ). ಆ ಮಹಿಳೆ ಹೇಳಿರುವ ಪ್ರಕಾರ ಅವರಿಗೆ ಇರುವುದು ಬರೇ ೧.೩೮ ಎಕರೆ ಹೊಲ. ಆದರೆ ಆ ರೈತ ೨೦೦೫ ರಲ್ಲಿಯೇ ಟ್ರಾಕ್ಟರ್‌ ಕರೀದಿಸಿದ್ದಾನೆ ! ಅದರ ಸಾಲ ಮತ್ತು ಬೆಳೆ ಸಾಲ ಸೇರಿ ಈಗ ಸಾಲದ ಮೊತ್ತ ಹನ್ನೊಂದು ಲಕ್ಷವನ್ನೂ ಮೀರಿದೆ. ಈ ಕಾರಣಕ್ಕಾಗಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಜ, ಒಂದೂವರೆ ಎಕರೆಯೂ ಇಲ್ಲದ ಹೊಲದ ರೈತ ಅಷ್ಟೊಂದು ಸಾಲ ತೀರಿಸುವುದು ಕನಸಿನ ಮಾತು. ಅದು ಹಾಗಿರಲಿ, ಆದರೆ ಆತ ಮಾಡಿಕೊಂಡಿರುವ ಸಾಲದ ಪರಿಯನ್ನು ಒಮ್ಮೆ ಗಮನಿಸಿ. ತನಗಿರುವ ಕೇವಲ ೧.೩೮ ಎಕರೆ ಹೊಲಕ್ಕಾಗಿ ಟ್ರಾಕ್ಟರ್‌ ಕೊಳ್ಳುವ (ಅದೂ ಸಾಲ ಮಾಡಿ) ಅಗತ್ಯವಾದರೂ ಏನಿತ್ತು ? ಇಷ್ಟು ಹೊಲವನ್ನು ಉಳುಮೆ ಮಾಡಲು ಟ್ರಾಕ್ಟರ್‌ಗೆ ಒಂದೆರಡು ದಿನ ಸಾಕು. ಕುಂಟೆ ಹೊಡೆಯುವುದು, ಅದೂ ಇದೂ ಸೇರಿದರೂ ಐದು ದಿನದ ಕೆಲಸ ಎಂದು ಇಟ್ಟುಕೊಳ್ಳಬಹುದು. ಬೆಳೆ ಹಾಕಿದ ನಂತರ ಹೊಲದಲ್ಲಿ ಅದಕ್ಕೆ ಕೆಲಸವಿರುವುದಿಲ್ಲ. ಒಂದು ಬೆಳೆ ಅಂದರೆ ಸುಮರು ಮೂರ್ನಾಲ್ಕು ತಿಂಗಳಂತೂ ಬೇಕೇ ಬೇಕು. ಅಂದರೆ ಒಂದು ಬೆಳೆಗೆ ಐದು ದಿನದ ಕೆಲಸ ಅಂತ ಹಿಡಿದರು ಅವನ ಟ್ರಾಕ್ಟರ್‌ಗೆ ವರ್ಷಕ್ಕೆ ಹೆಚ್ಚೆಂದರೆ ಹದಿನೈದು ದಿನದ ಕೆಲಸ. ಆದರೂ ಸಾಲ ಮಾಡಿ ಟ್ರಾಕ್ಟರ್‌ ಕೊಂಡಿದ್ದಾನೆ! ಯಾರದು ತಪ್ಪು ? ಆತ ಟ್ರಾಕ್ಟರ್‌ ಇಟ್ಟುಕೊಂಡು ಬೇರೆಯವರಿಗೆ ಬಾಡಿಗೆಗೆ ದುಡಿದಿದ್ದರೂ ಅದಕ್ಕೆ ಮಾಡಿರುವ ಸಾಲ ಇಷ್ಟರಲ್ಲೇ ತೀರುತ್ತಿತ್ತು. ಆದರೆ ಆತ ಹಾಗೇನೂ ಮಾಡಿದಂತೆ ಕಾಣಿಸುತ್ತಿಲ್ಲ. 

ಶೋಕಿಗಾಗಿಯೋ ಅಥವಾ ಬೇರೆಯವರು ಕೊಂಡಿದ್ದಾರೆ, ನಾನೇಕೆ ಕೊಳ್ಳಬಾರದು ಎಂದೋ, ಅಥವಾ ಮಾರಾಟಗಾರರ ಮಾತಿಗೆ ಮರುಳಾಗಿಯೋ ಒಟ್ಟಿನಲ್ಲಿ ರೈತರು ಇಂತಹ ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಇದನ್ನು ಅವರ ಅಮಾಯಕತೆ ಅನ್ನಬೇಕೋ, ದುರ್ದೈವ ಅನ್ನಬೇಕೋ, ಅತಿ ಬುದ್ದಿವಂತಿಕೆ ಅನ್ನಬೇಕೋ ಗೊತ್ತಾಗುವುದಿಲ್ಲ. ಸರ್ಕಾರ ರೈತರು ಸಾಲ ಮಾಡದಿರುವಂತೆ ಜಾಹೀರಾತುಗಳನ್ನು ಮಾಡುತ್ತಾ, ಟ್ರಾಕ್ಟರ್‌ ಮುಂತಾದ ರೈತ ಸಂಬಂಧಿ ವಸ್ತುಗಳ ಜಾಯೀರಾತು ನಿಯಂತ್ರಿಸುವತ್ತ ಮನಸ್ಸು ಮಾಡಿ ರೈತರು ಅನಾವಶ್ಯಕವಾಗಿ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಯತ್ತ ಮುಖ ಮಾಡುವುದನ್ನು ತಡೆಯಬೇಕಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...