ವಿಷಯಕ್ಕೆ ಹೋಗಿ

ಕರ್ನಾಟಕಕ್ಕಾಗಿ ಬಿಹಾರದಲ್ಲಿ ನಿತೀಶ್‌ಕುಮಾರ್‌ ಗೆಲ್ಲಬೇಕಾಗಿದೆ !



ಬಿಹಾರ ಚುನಾವಣೆಯಲ್ಲಿ ನನ್ನ ನೆಚ್ಚಿನ ನಿತೀಶ್‌ ಕುಮಾರ್‌ ಜಯ ಗಳಿಸಲಿ ಎಂದು ಆಸಿಸುವೆ.
ನಿತೀಶ್‌ ಬರುವ ಮೊದಲು ಬಿಹಾರ ಕೆಟ್ಟು ಕೆರ ಹಿಡಿದು ಹೋಗಿತ್ತು. ಲಾ & ಆರ್ಡರ್‌ ಮಣ್ಣು ಪಾಲಾಗಿತ್ತು. ಸ್ವತಃ ಪೊಲೀಸರೇ ದರೋಡೆ, ಅತ್ಯಾಚಾರಕ್‌ಇಳಿದ ಅನೇಕ ಪ್ರಕರಣಗಳು ವರದಿಯಾಗುತ್ತಿದ್ದವು. ದೂರದ ಕರ್ನಾಟಕದ ಪತ್ರಿಕೆಗಳಲ್ಲೂ ದಿನ ನಿತ್ಯ ಬಿಹಾರದ ಒಂದಿಲ್ಲೊಂದು ಸಮಾಜ ಘಾತಕದ ಸುದ್ದಿ ಇದ್ದೇ ಇರುತ್ತಿತ್ತು. ಹಾಗೆಯೇ ಅಲ್ಲಿನ ಅರಾಜಕತೆಯಿಂದ ಬೇಸತ್ತು ಮತ್ತು ಕೆಲಸವೇ ಇಲ್ಲದೇ ಲಕ್ಷಾಂತರ ಜನರು ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ವಲಸ ಬಂದು ಇಲ್ಲಿನ ಸ್ಥಳೀಯರ ಸಮಸ್ಯೆಯನ್ನು ಹೆಚ್ಚಿಸಿದ್ದರು.

ಆದರೆ ನಿತೀಶ್‌ಕುಮಾರ್‌ ಮುಖ್ಯಮಂತ್ರಿಯಾದ ನಂತರ ಬಿಹಾರದ ಚಿತ್ರಣವನ್ನೇ ಬದಲಿಸಿದರು. ಅಲ್ಲಿ ಮೊದಲು ಲಾ & ಆರ್ಡರ್‌ ಸರಿಪಡಿಸಲಾಯ್ತು. ನಂತರ ಚಿಕ್ಕಪುಟ್ಟ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಿ ಉದ್ಯೋಗವಕಾಶಗಳನ್ನು ಹೆಚ್ಚಿಸಲಾಯ್ತು. ಅಲ್ಲಿ ಯಾವ ಮಟ್ಟಿಗೆ ಬದಲಾವಣೆ ಆಯ್ತು ಎಂದರೆ ವಲಸೆ ಬಂದ ಬಿಹಾರಿಗಳಿಂದಲೇ ನಡೆಯುತ್ತಿದ್ದ ಬೆಂಗಳೂರಉ ಚೆನ್ನೈನಂತಹ ನಗರಗಳ ಬೃಹತ್‌ ಕಟ್ಟಡಗಳ ಕೆಲಸಕ್ಕೆ ಕ್ರಮೇಣ ಬಿಹಾರಿಗಳ ಕೊರತೆ ಎದುರಾಯ್ತು. (ಈಗ ಅವರ ಜಾಗದಲ್ಲಿ ಉತ್ತರ ಪ್ರದೇಶದವರೂ, ಹರಿಯಾಣ, ಒಡಿಶಾ, ಆಂಧ್ರದವರೂ ತುಂಬಿಕೊಂಡಿದ್ದಾರೆ). ಒಬ್ಬ ಮುಖ್ಯಮಂತ್ರಿ ಮಾಡಬೇಕಾದ ಕೆಲಸವೇ ಅದು. ಈ ಕಾರಣಕ್ಕೆ ನಿತೀಶ್‌ ನನಗೆ ಇಷ್ಟವಾಗುತ್ತಾರೆ, ಅದಕ್ಕಿಂತ ಮಿಗಿಲಾಗಿ ಅವರೊಬ್ಬ ಸಜ್ಜನ ಮತ್ತು ಸಮಾಜವಾದಿ. 

ಅವರು ಗೆಲ್ಲಬೇಕು. ಅವರು ಗೆಲ್ಲದೇ ಹೋದರೆ ಮತ್ತೆ ಅಲ್ಲಿ ಯಾವ ಸರ್ಕಾರ ಬಂದು ಮರಳಿ ಬಿಹಾರ ದಾರಿ ತಪ್ಪುವುದೋ ಹೇಳಲಾಗದು. ಹಾಗೇನಾದರೂ ನಡೆದರೆ ಮತ್ತೆ ಬೆಂಗಳೂರು ಮತ್ತು ಕರ್ನಾಟಕ ಬಿಹಾರಿಗಳ ದಾಂಗುಡಿಗೆ ತುತ್ತಾಗಿ ಸಮಸ್ಯೆ ಎದುರಿಸಲಿದೆ. ಹಾಗಾಗಿ ಈ ಬಾರಿ ಬಿಹಾರಕ್ಕಿಂತಲೂ ಹೆಚ್ಚಾಗಿ ನಮಗಾಗಿಯಾದರೂ ನಿತೀಶ್‌ಕುಮಾರ್‌ ಗೆಲ್ಲಲೇ ಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...