ವಿಷಯಕ್ಕೆ ಹೋಗಿ

ಬಲಿಚಕ್ರವರ್ತಿಯ ನೆನವ ದಿನಕ್ಕೆ ಪಟಾಕಿ ಯಾಕೆ ?



ದೀಪಾವಳಿ ಮೊದಲಿಗೆ ಪಟಾಕಿ ಹೊಡೆವ ಹಬ್ಬ ಆಗಿರಲಿಲ್ಲ. ಇದು ಬಲಿ ಚಕ್ರವರ್ತಿಯನ್ನು ಸ್ಮರಿಸಿ ಆತನಿಗೆ ಪೂಜೆ ಸಲ್ಲಿಸುವ ದಿನ. ಸತ್ತ ಪುಣ್ಯಾತ್ಮರನ್ನು ಸ್ಮರಿಸಲು ಅವರ ಪ್ರತಿಕೃತಿಯ ಎದುರು ದೀಪ ಹಚ್ಚುವ ಪರಿಪಾಠ ಮೊದಲಿನಿಂದಲೂ ಇತ್ತು. ಅದೇ ರೀತಿ ಬಲಿ ಚಕ್ರವರ್ತಿಗೆ ದೀಪ ಹಚ್ಚಿ ಆತನನ್ನು ಸ್ಮರಿಸುವ ದಿನವೇ "ಬಲಿ ಪಾಡ್ಯಮಿ". ಇಂದಿಗೂ ಮಲೆನಾಡಿನ ಬಹಳಷ್ಟು ಮನೆಯಲ್ಲಿ (ನಮ್ಮನೆಯೂ ಸೇರಿ) ಬಲಿಪಾಡ್ಯಮಿಯ ದಿನ ಕೆರೆ, ಹೊಳೆ ಅಥವಾ ಬಾವಿಯಿಂದ ತಾಮ್ರದ ತಂಬಿಗೆಯಲ್ಲಿ ನೀರನ್ನು ತಂದು ಅದಕ್ಕೆ ಅಡಿಕೆ ಸಿಂಗಾರ ಅಥವಾ ಹೂಗಳನ್ನು ಮುಡಿಸಿ ದೀಪ ಹಚ್ಚಿ ಪೂಜೆ ಮಾಡುತ್ತಾರೆ. ಇದನ್ನು "ಬಲೀಂದ್ರ ಪೂಜೆ" ಅಥವಾ "ಬಲಿ ಪೂಜೆ" ಎಂದೇ ಕರೆಯುತ್ತಾರೆ. ನಮ್ಮ ಕಡೆ ಈಗಲೂ ಬಲಿಯನ್ನು ಹೊಗಳುವ ಜಾನಪದ ಹಾಡುಗಳು (ಹಬ್ಬಾಡುವ ಪದಗಳು ಎನ್ನುತ್ತಾರೆ) ಚಾಲ್ತಿಯಲ್ಲಿವೆ. ಅವುಗಳಲ್ಲಿ ಒಂದು ಹಾಡು "ಎದ್ದೇಳು ಬಲಿವೀಂದರ, ನಿಜಕೊಂದ್ ಎಲ್ಲಾರ ಸಲುವಂತರಾ.." (ಎಲ್ಲರನ್ನೂ ಸಲಹುವ ಬಲೀಂದ್ರ ಎದ್ದೇಳು ) ಎಂದು ಪ್ರಾರಂಭವಾಗುತ್ತದೆ.
ಹಾಗೆಯೇ ಹಸು, ಎತ್ತುಗಳಿಗೆ ಹೂಗಳ ಹಾರ ಹಾಕಿ ಪೂಜೆ ಮಾಡುವುದೂ, ಅವುಗಳಿಗೆ ಇಷ್ಟದ ತಿನಿಸು ಮಾಡಿ ತಿನ್ನಿಸುವುದೂ ಇದೆ. (ಈ ಸಮಯಕ್ಕೆ ಅವುಗಳನ್ನು ಬಳಸಿಕೊಂಡು ದುಡಿವ ಬೇಸಾಯದ ಕೆಲಸ ಬಹುತೇಕ ಮುಗಿದಿರುತ್ತದಾದ್ದರಿಂದ ಅವುಗಳಿಗೆ ಈ ಅಕ್ಕರೆ). 
ತೀರಾ ಇತ್ತೀಚಿನವರೆಗೂ ನಮ್ಮ ಕಡೆ ಈ ಹಬ್ಬಕ್ಕೆ ಪಟಾಕಿ ಹೊಡೆವ ಪರಿಪಾಠ ಇರಲಿಲ್ಲ. ಅದು ಇತ್ತೀಚಿನ ಬೆಳವಣಿಗೆ. "ದೀಪಾವಳಿ" ಹೆಸರು ಕೂಡಾ ಉತ್ತರದ ಕಡೆಯವರಿಂದ ಬಂದ ಹೆಸರು. ನಾವಿದನ್ನು "ದೊಡ್ಡ ಹಬ್ಬ" ಅಂತ ಕರೆದು ಕೊನೆಯಲ್ಲಿ "ವರ್ಷತೊಡಕು" ಆಚರಿಸಿ ಮರಿ ಹೊಡೆದು ದೊಡ್ಡದಾಗಿ ಆಚರಿಸುತ್ತೇವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ನಿರ್ಜೀವ ವಸ್ತುಗಳಿಂದ ಜೀವಕೋಶದ ರಚನೆ...

ಜೀವಿಗಳ ಉಗಮ ಆಕಸ್ಮಿಕವಾದುದು ಎಂಬ ವಿಜ್ಞಾನಿಗಳ ಹೇಳಿಕೆಗೆ ಈಗಾಗಲೇ ಸಾವಿರಾರು ಪುರಾವೆಗಳು ಸಿಕ್ಕಿವೆ. ಅವುಗಳಲ್ಲಿ ಪ್ರಮುಖವಾದುದು ಜೀವಕೋಶಗಳ ರಚನೆ ಆಗುತ್ತಿರುವು ಮುಖ್ಯವಾಗಿ ಕೇವಲ ಐದು ಮೂಲ ವಸ್ತುಗಳಿಂದ. ಅವುಗಳೆಂದರೆ .. ೧. ಹೈಡ್ರೋಜನ್‌ ೨. ಆಕ್ಸಿಜನ್‌ ೩. ಕಾರ್ಬನ್‌ ೪. ನೈಟ್ರೋಜನ್‌ ೫. ಕ್ಯಾಲ್ಸಿಯಂ ಈ ಐದು ಮೂಲ ವಸ್ತುಗಳೇ ನಮ್ಮ ದೇಹದ ೯೯% ಭಾಗವನ್ನು ಆವರಿಸಿಕೊಂಡಿರುವುದು. ಇದನ್ನು ಹೇಳಿದ ಕೂಡಲೇ ಆಸ್ತಕರು ತಕ್ಷಣ "ಹಾಗಿದ್ದರೆ ಈ ವಸ್ತುಗಳನ್ನು ಕೊಡುತ್ತೇನೆ, ಜೀವಿಯೊಂದನ್ನು ಮಾಡಿ ಕೊಡಿ ನೋಡುವ" ಅನ್ನುವ ಸವಾಲನ್ನು ಒಡ್ಡುತ್ತಾರೆ. ಆ ಸವಾಲನ್ನು ವಿಜ್ಞಾನಿಗಳು ಈಗಾಗಲೇ ಸ್ವೀಕರಿಸಿದ್ದಾರೆ, ಮತ್ತು ನಿರ್ಜೀವ ವಸ್ತುಗಳಿಂದ ಜೀವಕೋಶವನ್ನು ಸೃಷ್ಟಿಸಲು ಹೆಣಗುತ್ತಿದ್ದಾರೆ.  ಮೇಲೆ ತಿಳಿಸಿದ ಮೂಲವಸ್ತುಗಳ ಯಾವುದೋ ಒಂದು ವಿಶಿಷ್ಟ ಮಿಶ್ರಣದಲ್ಲೇ ಜೀವಿಗಳ ಉದಯ ಆಯ್ತು ಅನ್ನುವುದುವಿಜ್ಞಾನಿಗಳ ಬಲವಾದ ನಂಬಿಕೆ. ಏಕೆಂದರೆ ಮೇಲ್ಕಾಣಿಸಿದ ಎಲ್ಲಾ ಐದೂ ವಸ್ತುಗಳೂ ಸಹ ಜ್ವಾಲಾಮುಖಿಯ ಲಾವಾರಸ ನೀರಿನೊಂದಿಗೆ ಬೆರೆಯುವ ಸ್ಥಳದಲ್ಲಿ ಹೆಚ್ಚಾಗಿ ಇರುವುದನ್ನು ಕಾಣಬಹುದು. ಆ ಜಾಗವು ಒಂದು ವಿಶಿಷ್ಟ ರಾಸಾಯನಿಕ ಕ್ರಿಯೆಯನ್ನು ನಡೆಸುತ್ತಾ ಇರುತ್ತದೆ. ಇಂತಹ ಸಮಯದಲ್ಲೇ ಜೀವಿಯ ಉಗಮ ಆಗಿರುವ ಸಾಧ್ಯತೆ ಬಲವಾಗಿದೆ. ಏಕೆಂದರೆ ಭೂಮಿಯು ರಚನೆಗೊಂಡು ತಂಪಾಗುತ್ತಿದ್ದ ಸಮಯದಲ್ಲಿ ಕೂಡಾ ಇದೇ ತೆರನಾದ ಸ್ಥಿತಿಯು ಲಕ್ಷಾಂತರ ವರ್ಷಗಳ ವರೆಗೆ ಮುಂದ...