ವಿಷಯಕ್ಕೆ ಹೋಗಿ

ವೀರ ಟಿಪ್ಪು ಸುಲ್ತಾನ್‌



ಟಿಪ್ಪು ಸುಲ್ತಾನ್‌ ಮತಾಂಧನಗಿದ್ದ ಎಂಬುದಕ್ಕೆ ಯಾವುದೇ ಆಧಾರವಿಲ್ಲ. ಆತನಿಂದ ನಡೆದ ಹತ್ಯೆಗಳು, ಯುದ್ದಗಳು ಎಲ್ಲದಕ್ಕೂ ಕಾರಣ ಆತನ ರಾಜ್ಯ ವಿಸ್ತರಿಸುವ, ತನ್ನೆದುರು ತಲೆ ಎತ್ತಿ ನಿಂತವರನ್ನು ಬಗ್ಗು ಬಡಿವ ಯುದ್ದೋನ್ಮಾದಗಳೇ ಕಾರಣವಾಗಿತ್ತು. ಈ ಯುದ್ದೋನ್ಮಾದ ಆತನ ತಂದೆ ಹೈದರಾಲಿಯಿಂದ ಬಂದುದು. ಹೈದರಾಲಿ ಮತ್ತು ಟಿಪ್ಪುವಿನ ಆಸ್ಥಾನ ಮಂತ್ರಿ ದಿವಾನ್‌ ಪೂರ್ಣಯ್ಯ ಒಬ್ಬ ಬ್ರಾಹ್ಮಣರಾಗಿದ್ದರು. ಹೈದರಾಲಿಯ ಕಾಲದಲ್ಲಿ ದುರ್ಗದ ಮದಕರಿ ನಾಯಕನನ್ನೂ ಸೇರಿದಂತೆ, ಪೇಶ್ವೆಗಳು ಮತ್ತು ಕೆಳದಿ, ಶೀರ್ವ, ರಾಮದುರ್ಗ ಮುಂತಾದ ಎಲ್ಲಾ ಹಿಂದು ಪಾಳೆಯಗಾರರನ್ನೂ ರಾಜರುಗಳನ್ನೂ ಸೋಲಿಸಲು ಪೂರ್ಣಯ್ಯನವರ ತಂತ್ರ ಕುತಂತ್ರಗಳೇ ಕಾರಣವಾಗಿದ್ದವು. ಮದಕರಿ ನಾಯಕನ ಮಂತ್ರಿ ಕೂಡಾ ಹೈದರಾಲಿಗೆ ದುರ್ಗದ ರಹಸ್ಯಗಳನ್ನು ಒದಗಿಸಿ ಮದಕರಿಯ ಸೋಲಿಗೆ ಕಾರಣವಾಗುತ್ತಾನೆ. ಹಾಗೆಯೇ ಹೈದರಾಲಿಯ ಮುಸ್ಲಿಂ ಸರ್ದಾರನೊಬ್ಬ ಕೂಡಾ ಮದಕರಿ ನಾಯಕನೊಂದಿಗೆ ಸ್ನೇಹ ಬೆಳೆಸಿ ಹೈದರಾಲಿಗೂ ಮೋಸ ಮಾಡುತ್ತಾನೆ. ಇವೆಲ್ಲಾ ಆಗಿನ ಸಂದರ್ಭದ ಸಹಜ ಘಟನಾವಳಿಗಳು. 
ಹೈದರಾಲಿಯಂತೆಯೇ ಯುದ್ದೋತ್ಸಾಹ ತೋರುವ ಟಿಪ್ಪು ಅಕ್ಕಪಕ್ಕದ ಪಾಳೆಗಾರರ ಮೇಲೆ ದಂಡೆತ್ತಿ ಹೋಗಿದ್ದರಲ್ಲಿ ಮತ್ತು ಅಲ್ಲಿ ಯುದ್ದ, ಸಾವು ನೋವು ಸಂಭವಿಸಿದ್ದರಲ್ಲಿ ಯಾವ ವಿಶೇಷವೂ ಇಲ್ಲ. ಹಾಗೆಯೇ ಮತಾಂಧನಾಗಿದ್ದರೆ ಶ್ರೀರಂಗಪಟ್ಟಣ, ಮಂಡ್ಯಗಳಲ್ಲಿ ಮುಸ್ಲಿಮರ ಸಂಖ್ಯೆ ಯಥೇಚ್ಚವಾಗಿರಬೇಕಿತ್ತು. ಅಂದು ಹಿಂದು ರಾಜರುಗಳೇ ಹಿಂದು ರಾಜ್ಯಗಳ ಮೇಲೆ ಡಂಡೆತ್ತಿ ಹೋಗುವುದೂ, ಭಯಂಕರ ಯುದ್ದ ಮಾಡುವುದೂ, ಕೊಳ್ಳೆ ಹೊಡೆಯುವುದೂ ಮಾಮೂಲಿ ಸಮಾಚಾರವಾಗಿತ್ತು. ದೇಶದ ಪರಿಕಲ್ಪನೆ ಇಲ್ಲದ ಸಮಯದ ಟಿಪ್ಪುವನ್ನು ದೇಶಭಕ್ತ ಎನ್ನುವುದು ಸಮಂಜಸವಲ್ಲ. ಅದರೆ ಆತನೊಬ್ಬ ವೀರನಾಗಿದ್ದ ಎಂಬುದರಲ್ಲಿ ಸಂದೇಹವಿಲ್ಲ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...