ವಿಷಯಕ್ಕೆ ಹೋಗಿ

ಸಿ.ಟಿ. ರವಿ ಸಂದರ್ಶನ ಮಾಡಿದ್ದು



ಅದು ನಾನು ಚಿಕ್ಕಮಗಳೂರಿನ ಒಂದು ಸ್ಥಳಿಯ ಪತ್ರಿಕೆಯಲ್ಲಿ ಸಹ ಸಂಪಾದಕನಾಗಿ ಇದ್ದ ಸಮಯ. ಆಗ ಸಿ.ಟಿ. ರವಿ ಅವರು ಬರಿ ಶಾಸಕರಾಗಿದ್ದರು. ನಮ್ಮ ಪತ್ರಿಕೆಯ ಮಾಲೀಕರು ದೊಡ್ಡ ಗಾರ್ಮೆಂಟ್ಸ್ ಸಹ ಹೊಸದಾಗಿ ಮಾಡಿದ್ದರು. ಬೇರೆ ಬೇರೆ ಕಾರಣಗಳಿಂದ ಅವರಿಗೆ ಶಾಸಕರ ಸಹಾಯ ಬೇಕೇ ಆಗಿತ್ತು. 

ಒಂದು ದಿನ ರವಿ ಅವರನ್ನು ಕಚೇರಿಗೆ ಕರೆದು, ಪಕ್ಕದಲ್ಲೇ ಇದ್ದ ಗಾರ್ಮೆಂಟ್ಸ್ ಅನ್ನೂ ತೋರಿಸಲು ನಿರ್ಧರಿಸಿದರು. ಹಾಗೆ ಬರುವ ರವಿ ಅವರದೊಂದು ಸಂದರ್ಶನ ಮಾಡಿ ಪತ್ರಿಕೆಯಲ್ಲಿ ಹಾಕುವಂತೆ ನನಗೂ ಹೇಳಿದರು. ಆಗಷ್ಟೇ ಬಾಬಾ ಬುಡನ್ ಗಿರಿ ವಿವಾದ ಭುಗಿಲೆದ್ದ ಸಮಯ, ಮತ್ತು ಅದರಲ್ಲಿ ರವಿ ಅವರೂ ಸಹ ಸಕ್ರಿಯರಾಗಿದ್ದರು.

ಸಂದರ್ಶನ ಶುರು ಮಾಡಿದ ನಾನು ಅವರ ರಾಜಕೀಯ ಜೀವನದ ಬಗ್ಗೆ ಎಲ್ಲಾ ಕೇಳಿ ಆದ ನಂತರ ಸಹಜವಾಗಿ ದತ್ತ ಪೀಠದ ಬಗ್ಗೆ ಪ್ರಶ್ನೆ ಎತ್ತಿದೆ. ಒಂದು ಕ್ಷಣ ಮೌನವಾದ ರವಿ ಅವರು ಪಕ್ಕದಲ್ಲೇ ಕುಳಿತಿದ್ದ ಪರಕಾಶಕರನ್ನು ನೋಡಿದರು. ಪ್ರಕಾಶಕರು (ಸಂಪಾದಕ, ಮಾಲೀಕ) ಸಾವರಿಸಿಕೊಂಡು ನನ್ನಲ್ಲಿ "ಈಗ ಆ ವಿಶಯ ಬೇಡ ಬಿಡಿ." ಅಂದರು. ಅಲ್ಲಿಗೆ ಸಂದರ್ಶನ ಮುಕ್ತಾಯವಾಯ್ತು.

ಶಾಸಕರು ಹೋದ ನಂತರ ಸಂಪಾದಕರು ನನ್ನಲ್ಲಿ ಹೇಳಿದರು.. "ಯಾವುದೇ ಪ್ರಶ್ನೆಗೆ ಸಮಯ ಸಂದರ್ಭ ಇರುತ್ತೆ. ಈಗ ಅವರಿಂದ ನಮಗೆ ಕೆಲಸ ಆಗಬೇಕಾಗಿದೆ. ಇಂತಹ ಸಮಯದಲ್ಲಿ ಅವರಿಗೆ ಮುಜುಗರ ಮಾಡಬಾರದು... ನಮ್ಮ ಕೆಲಸ ಆಗಿಲ್ಲ ಅಂದರೆ ಮುಂದೆ ನೋಡುವ.." ಅಂದರು.

ಅವರ ಕೆಲಸ ಅಯ್ತೋ ಬಿಡ್ತೋ ಗೊತ್ತಾಗಲಿಲ್ಲ. ಸ್ವಲ್ಪ ದಿನಕ್ಕೆ ನಾನೇ ಕೆಲಸ ಬಿಟ್ಟೆ. ಆಮೇಲೆ ಅವರ ಗಾರ್ಮೆಂಟ್ಸ್ ಸಹ ಮುಚ್ಚಿ ಹೋಯ್ತು ಅಂತ ಗೊತ್ತಾಯ್ತು. 

ನಿನ್ನೆ ಪ್ರಕಾಶ್ ರೈ ಅವರನ್ನು ವಾಹಿನಿ ಒಂದರ ನಿರೂಪಕಿ ಯಾವುದೋ ಹೊತ್ತಲ್ಲಿ ಯಾವುದೋ ಪ್ರಶ್ನೆ ಕೇಳಿ ರಾದ್ದಾಂತ ಮಾಡಿಕೊಂಡ ಘಟನೆ ನೋಡಿ ಇದು ನೆನಪಾಯ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...