ವಿಷಯಕ್ಕೆ ಹೋಗಿ

ಭೂಮಿಯ ಕಾಂತ ವಲಯ ಬದಲಾಗುವ ಹೊತ್ತಲ್ಲಿ..


ಸೂರ್ಯನಿಂದ ಬರುವ ರೆಡಿಯೇಷನ್ ಕಿರಣಗಳನ್ನು ಭೂಮಿಯ ಕಾಂತ ವಲಯ ತಡೆದು ಇಲ್ಲಿನ ಜೀವಿಗಳನ್ನು ಪೊರೆಯುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತು. ಅಂದರೆ ಒಂದೇ ಒಂದು ನಿಮಿಷ ಭೂಮಿಯ ಈ ಕಾಂತ ವಲಯ ಕೆಲಸ ನಿಲ್ಲಿಸಿದರೂ ಸಾಕು, ಬಹಳಷ್ಟು ಜೀವಿಗಳ ನಾಶ ಮತ್ತು ಉಳಿದರೂ ಕ್ಯಾನ್ಸರ್ ನಂತಹ ಭೀಕರ ಕಾಯಿಲೆಗಳಿಗೆ ತುತ್ತಾಗುವ ಅಪಾಯ ಇದ್ದೇ ಇದೆ. 

ಆದರೆ ಹೀಗೆ ಭೂಮಿಯ ಕಾಂತ ವಲಯ ಇದ್ದಕ್ಕಿದ್ದಂತೆ ಕೆಲಸ ನಿಲ್ಲಿಸಲು ಸಾದ್ಯವೇ ಎಂದು ನೋಡಲು ಹೋದರೆ "ಹೌದು, ಅದೂ ಆಗುತ್ತದೆ" ಎಂದು ಹೇಳುತ್ತಾರೆ ವಿಜ್ಞಾನಿಗಳು. 

ಭೂಮಿಯ ಕಾಂತ ವಲಯವು ತೆಂಕಣ ಮತ್ತು ಬಡಗಣ ತುದಿಗಳನ್ನು ಹೊಂದಿದೆ ತಾನೇ, ಈ ತುದಿಗಳು ಸುಮಾರು ಐವತ್ತು ಸಾವಿರದಿಂದ ಲಕ್ಷ ವರ್ಷಗಳ ಒಳಗೆ ಒಂದು ಸಲ ತೆಂಕಣ ತುದಿಯು ಬಡಗಣಕ್ಕೂ, ಬಡಗಣ ತುದಿಯು ತೆಂಕಣಕ್ಕೂ ಬದಲಾಗುವುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಅಂದರೆ ಈಗ ಒಂದು ದಿಕ್ಸೂಚಿಯನ್ನು ಎಲ್ಲಿ ಇಟ್ಟರೂ ಅದು ಈಗ ಬಡಗು ದಿಕ್ಕನ್ನು ತೋರಿಸುತ್ತೆ. ಆದರೆ ಭೂಮಿಯ ಕಾಂತ ವಲಯ ತಲೆ ಕೆಳಗು ಆಯ್ತು ಅಂದರೆ ದಿಕ್ಸೂಚಿಯು ತೆಂಕು ದಿಕ್ಕನ್ನು ತೋರಿಸಲು ತೊಡಗುತ್ತೆ. ಇದು ಸುಮಾರು 50 ಸಾವಿರ ವರ್ಷಗಳಿಗೆ ಒಮ್ಮೆ ಹೀಗೆ ಬದಲಾಗುತ್ತ ಇರುತ್ತೆ ಅನ್ನೋದು ವಿಜ್ಞಾನಿಗಳ ಹೇಳಿಕೆ. ಆದರೆ ಅದು ಯಾಕೆ ಬದಲಾಗುತ್ತೆ ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಆದರೆ ಈ ರೀತಿ ಈ ಹಿಂದೆ ಬದಲಾಗಿ ಆಗಲೇ 50 ಸಾವಿರ ವರ್ಶ ಕಳೆದಿದ್ದು ಮುಂದಿನ ಬದಲಾವಣೆ ಯಾವ ಹೊತ್ತಲ್ಲಿ ಬೇಕಾದರೂ ಆಗ
ಅಹುದು! 

ಆದರೆ ತೊಂದರೆ ಇರೋದು ಈ ಬಡಗಣದಿಂದ ತೆಂಕಣಕ್ಕೆ ವಲಯವು ಬದಲಾಗಲು ತಗುಲುವ ಹೊತ್ತು ಎಷ್ಟು ಅನ್ನೋದರ ಮೇಲೆ ನಿರ್ದಾರ ಆಗುತ್ತೆ. ಇಷ್ಟು ದೊಡ್ಡ ಭೂಮಿಯ ಕಾಂತ ವಲಯ ಕೆಲವೇ ಸೆಕೆಂಡು ಗಳಲ್ಲಿ ಬದಲಾಗಿ ಹೋಗುತ್ತೆ ಅನ್ನೋದು ಸಾಧ್ಯ ಇಲ್ಲದ ಮಾತು. ಅದು ಹೆಚ್ಚು ಹೊತ್ತು ತಗೊಂಡಷ್ಟೂ ಭೂಮಿಯ ಮೇಲಿರುವ ಜೀವಿಗಳಿಗೆ ತೊಂದರೆ ಹೆಚ್ಚು. ಮುನುಷ್ಯ ಕುಲವೇ ನಾಶ ಆದರೂ ಆಗಬಹುದು. 

ಹೀಗೆ ಕಾಂತ ವಲಯ ಬದಲಾಗುವ ಮೊದಲು ಏನಾದರೂ ಮುನ್ಸೂಚನೆ ಸಿಗುತ್ತಾ ? ಅನ್ನೋದರ ಮೇಲೆ ವಿಜ್ಞಾನಿಗಳು ಸಂಶೋದನೆ ನಡೆಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...