ವಿಷಯಕ್ಕೆ ಹೋಗಿ

ವೇಶ್ಯಾವೃತ್ತಿ ಕಾನೂನುಬದ್ದಗೊಳ್ಳಲಿ...


ಕೆಲವು ವರ್ಷದ ಹಿಂದೆ ಒಬ್ಬರು ಕನ್ನಡದ ನಟಿ ( ತಾರಾ ಅವರು ಅಂತ ನೆನಪು ) "ವೇಶ್ಯಾವಾಟಿಕೆ ಯನ್ನು ಕಾನೂನು ಬದ್ಧಗೊಳಿಸಬೇಕು" ಅಂತ ಹೇಳಿದ್ದರು. ಅದನ್ನು ಅಂದು ಬಹಳಷ್ಟು ಮಂದಿ ವಿರೋಧ ಮಾಡಿದ್ದರು. ಅದನ್ನು ನಾನು ಬೆಂಬಲಿಸಿ ಫೇಸ್‌ಬುಕ್‌ನಲ್ಲಿ ಹಂಚಿಕೆ ಮಾಡಿದಾಗ ಅಲ್ಲಿಯೂ ತುಂಬಾ ಜನ ವಿರೋಧ ಮಾಡಿದ್ದರು. "ನಿನ್ನ ಅಕ್ಕ, ತಂಗಿ ಆ ವೃತ್ತಿಯಲ್ಲಿ ಇದ್ದಿದ್ದರೂ ಹೀಗೆ ಬೆಂಬಲ ಕೊಡುತಿದ್ಯಾ?" ಅಂತಲೂ ಕೇಳಿದ್ದರು. ವೇಶ್ಯಾವಾಟಿಕೆ ನಿರ್ಮೂಲನೆ ಹೇಗೆ ? ಅಂತ ತಿರುಗಿ ಕೇಳಿದರೆ ಅದಕ್ಕೆ ಕಾನೂನು ಇದೆಯಲ್ಲ ಅಂದಿದ್ದರು.. 

ಅದಾಗಿ ಐದಾರು ವರ್ಷಗಳೇ ಕಳೆದಿವೆ. ಈಗಲೂ ವೇಶ್ಯಾವಾಟಿಕೆ ಯಲ್ಲಿ ನಮ್ಮ ರಾಜ್ಯದಲ್ಲೇ ಒಂದು ಲಕ್ಷಕ್ಕೂ ಹೆಚ್ಚು ಮಂದಿ ತೊಡಗಿಸಿಕೊಂಡಿದ್ದಾರೆ ಅನ್ನೋ ವರದಿ ಬಂದಿದೆ !! ವೇಶ್ಯಾವಾಟಿಕೆ ವಿರೋಧಿ ಕಾನೂನು ಹಾಗೆಯೇ ಇದೆ, ಆದರೆ ಆ ದಂದೆ ಮಾತ್ರ ನಿಂತಿಲ್ಲ. ಅದರಲ್ಲಿ ತೊಡಗಿಸಿಕೊಂಡಿರುವ ಆ ಲಕ್ಷಕ್ಕೂ ಹೆಚ್ಚು ಮಹಿಳೆಯರ ಮಾಹಿತಿ ಯಾರ ಬಳಿಯೂ ಇಲ್ಲ ! ಅವರಿಂದ ಬರುವ ಆದಾಯ ಅವರಿಗೇ ಸಿಗುತ್ತಿದೆ ಅಂತ ಯಾರಾದರೂ ಹೇಳಲು ಸಾದ್ಯವೇ ? ವಿಟರಿಂದ, ಪೊಲೀಸರಿಂದ ಮತ್ತು ದಂದೆ ನಡೆಸುವವರಿಂದ ನಡೆಯುತ್ತಿರುವ ದೌರ್ಜನ್ಯವನ್ನು ಯಾರು ತಡೆಯಲು ಸಾಧ್ಯ ಹೇಳಿ. 'ಕೊಳಕು ಎಷ್ಟಾದರೂ ಇರಲಿ, ಅದು ಎದುರಿಗೆ ಕಾಣಿಸದಿದ್ದರೆ ಸಾಕು' ಅನ್ನುವಂತಿದೆ ಇವರು ಹೇಳುವುದು.
[ ಕೃಪೆ : ಪ್ರಜಾವಾಣಿ ೧೫ ಜುಲೈ ೨೦೧೭ ]

ವೇಶ್ಯಾವಾಟಿಕೆಯನ್ನು ಕಾನೂನುಬದ್ಧ ಗೊಳಿಸುವ ಮೂಲಕ ಆ ವೃತ್ತಿಯಲ್ಲಿ ಇರುವವರಿಗೆ ಹಲವಾರು ಅನುಕೂಲಗಳನ್ನು ಮಾಡಿಕೊಡಬಹುದು.

೧. ಯಾರೆಲ್ಲಾ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಂಬಂಧಪಟ್ಟ ಇಲಾಖೆಗೆ ದೊರೆಯುತ್ತದೆ.
೨. ವಿಟರನ್ನು ಆಯ್ಕೆ ಮಾಡಿಕೊಳ್ಳುವ, ರಜೆ ಹಾಕುವ, ಬೇಕಾದಷ್ಟು ವಿಶ್ರಾಂತಿ ತೆಗೆದುಕೊಳ್ಳುವ ಮತ್ತು ವಿಟರಿಂದ ಆಗುತ್ತಿರುವ ಹಿಂಸೆಯನ್ನು ಎದುರಿಸುವ ಅವಕಾಶ ದೊರೆಯುತ್ತದೆ.
೩. ಅವರ ಹಿನ್ನೆಲೆಯನ್ನು ಗಮನಿಸಿ ಈ ಕೆಲಸದಿಂದ ದೂರ ಮಾಡಿ ಬೇರೆ ಕೆಲಸ ಕೊಡಿಸುವ ಅಥವಾ ಬೇರೆ ಬಗೆಉ ಒಳ್ಳೆಯ ಬದುಕು ಕಟ್ಟಿಕೊಳ್ಳುವಂತೆ ಸಹಾಯ ಮಾಡಲು ಸಮಾಜಸೇವಾ ಸಂಸ್ಥೆಗಳಿಗೆ ದಾರಿ ಮುಕ್ತವಾಗುತ್ತದೆ.
೪. ಹಿಂದು ಮುಂದಿಲ್ಲದೇ ಬಂದು ಈ ಕೂಪಕ್ಕೆ ಬೀಳುವುದನ್ನು ತಪ್ಪಿಸಬಹುದು.
೫. ಕಾನೂನಿನ ಕಣ್ಣು ತಪ್ಪಿಸಿ ಯಾರಾದರೂ ಈ ದಂದೆ ನಡೆಸಲು ಹೊರಟರೆ ಪರವಾನಿಗಿ ಪಡೆದವರೇ ಸುಳುಹು ಕೊಡುತ್ತಾರೆ, ಮತ್ತು ಅಂತಹ ಕಡೆ ಹೋಗಲು ವಿಟರೂ ಹಿಂಜರಿಯುತ್ತಾರೆ.
೬. ಈ ಕೆಲಸದಲ್ಲಿ ತೊಡಗಿಸಿಕೊಂಡಿರುವವರ ಆರೋಗ್ಯವನ್ನು ಅಗಾಗ ತಪಾಸಣೆ ನಡೆಸುವ ವ್ಯವಸ್ಥೆ ಮಾಡಬಹುದು.
೭. ಎಲ್ಲಕ್ಕಿಂತ ಮಿಗಿಲಾಗಿ ಅಸಾಹಯಕತೆಯಿಂದ ಹಿಂಸೆಗೆ ಒಳಗಾಗುವುದನ್ನು ಮತ್ತು ಒಲ್ಲದ ಮನಸ್ಸಿನಿಂದ ಈ ಕೆಲಸಕ್ಕೆ ಇಳಿಯುವುದನ್ನು ತಪ್ಪಿಸಬಹುದು.

ಕೊನೆಯದಾಗಿ ಹೇಳುವುದೇನೆಂದರೆ ವೇಶ್ಯಾವಾಟಿಕೆಯನ್ನು ಸಂಪೂರ್ಣ ತೆಗೆದು ಹಾಕಲು ಇನ್ನು ಸಾವಿರ ವರ್ಷ ಹೋದರೂ ಸಾಧ್ಯವಿಲ್ಲ. ಒಂದು ವೇಳೆ ಹಾಗೆ ಮಾಡಿದರೂ ಅದರಿಂದ ಅತ್ಯಾಚಾರಗಳು ಅಧಿಕವಾಗುವ ಅಪಾಯ ಇದ್ದೇ ಇದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...