ವಿಷಯಕ್ಕೆ ಹೋಗಿ

ವೇಶ್ಯಾವೃತ್ತಿ ಕಾನೂನುಬದ್ದಗೊಳ್ಳಲಿ...


ಕೆಲವು ವರ್ಷದ ಹಿಂದೆ ಒಬ್ಬರು ಕನ್ನಡದ ನಟಿ ( ತಾರಾ ಅವರು ಅಂತ ನೆನಪು ) "ವೇಶ್ಯಾವಾಟಿಕೆ ಯನ್ನು ಕಾನೂನು ಬದ್ಧಗೊಳಿಸಬೇಕು" ಅಂತ ಹೇಳಿದ್ದರು. ಅದನ್ನು ಅಂದು ಬಹಳಷ್ಟು ಮಂದಿ ವಿರೋಧ ಮಾಡಿದ್ದರು. ಅದನ್ನು ನಾನು ಬೆಂಬಲಿಸಿ ಫೇಸ್‌ಬುಕ್‌ನಲ್ಲಿ ಹಂಚಿಕೆ ಮಾಡಿದಾಗ ಅಲ್ಲಿಯೂ ತುಂಬಾ ಜನ ವಿರೋಧ ಮಾಡಿದ್ದರು. "ನಿನ್ನ ಅಕ್ಕ, ತಂಗಿ ಆ ವೃತ್ತಿಯಲ್ಲಿ ಇದ್ದಿದ್ದರೂ ಹೀಗೆ ಬೆಂಬಲ ಕೊಡುತಿದ್ಯಾ?" ಅಂತಲೂ ಕೇಳಿದ್ದರು. ವೇಶ್ಯಾವಾಟಿಕೆ ನಿರ್ಮೂಲನೆ ಹೇಗೆ ? ಅಂತ ತಿರುಗಿ ಕೇಳಿದರೆ ಅದಕ್ಕೆ ಕಾನೂನು ಇದೆಯಲ್ಲ ಅಂದಿದ್ದರು.. 

ಅದಾಗಿ ಐದಾರು ವರ್ಷಗಳೇ ಕಳೆದಿವೆ. ಈಗಲೂ ವೇಶ್ಯಾವಾಟಿಕೆ ಯಲ್ಲಿ ನಮ್ಮ ರಾಜ್ಯದಲ್ಲೇ ಒಂದು ಲಕ್ಷಕ್ಕೂ ಹೆಚ್ಚು ಮಂದಿ ತೊಡಗಿಸಿಕೊಂಡಿದ್ದಾರೆ ಅನ್ನೋ ವರದಿ ಬಂದಿದೆ !! ವೇಶ್ಯಾವಾಟಿಕೆ ವಿರೋಧಿ ಕಾನೂನು ಹಾಗೆಯೇ ಇದೆ, ಆದರೆ ಆ ದಂದೆ ಮಾತ್ರ ನಿಂತಿಲ್ಲ. ಅದರಲ್ಲಿ ತೊಡಗಿಸಿಕೊಂಡಿರುವ ಆ ಲಕ್ಷಕ್ಕೂ ಹೆಚ್ಚು ಮಹಿಳೆಯರ ಮಾಹಿತಿ ಯಾರ ಬಳಿಯೂ ಇಲ್ಲ ! ಅವರಿಂದ ಬರುವ ಆದಾಯ ಅವರಿಗೇ ಸಿಗುತ್ತಿದೆ ಅಂತ ಯಾರಾದರೂ ಹೇಳಲು ಸಾದ್ಯವೇ ? ವಿಟರಿಂದ, ಪೊಲೀಸರಿಂದ ಮತ್ತು ದಂದೆ ನಡೆಸುವವರಿಂದ ನಡೆಯುತ್ತಿರುವ ದೌರ್ಜನ್ಯವನ್ನು ಯಾರು ತಡೆಯಲು ಸಾಧ್ಯ ಹೇಳಿ. 'ಕೊಳಕು ಎಷ್ಟಾದರೂ ಇರಲಿ, ಅದು ಎದುರಿಗೆ ಕಾಣಿಸದಿದ್ದರೆ ಸಾಕು' ಅನ್ನುವಂತಿದೆ ಇವರು ಹೇಳುವುದು.
[ ಕೃಪೆ : ಪ್ರಜಾವಾಣಿ ೧೫ ಜುಲೈ ೨೦೧೭ ]

ವೇಶ್ಯಾವಾಟಿಕೆಯನ್ನು ಕಾನೂನುಬದ್ಧ ಗೊಳಿಸುವ ಮೂಲಕ ಆ ವೃತ್ತಿಯಲ್ಲಿ ಇರುವವರಿಗೆ ಹಲವಾರು ಅನುಕೂಲಗಳನ್ನು ಮಾಡಿಕೊಡಬಹುದು.

೧. ಯಾರೆಲ್ಲಾ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಂಬಂಧಪಟ್ಟ ಇಲಾಖೆಗೆ ದೊರೆಯುತ್ತದೆ.
೨. ವಿಟರನ್ನು ಆಯ್ಕೆ ಮಾಡಿಕೊಳ್ಳುವ, ರಜೆ ಹಾಕುವ, ಬೇಕಾದಷ್ಟು ವಿಶ್ರಾಂತಿ ತೆಗೆದುಕೊಳ್ಳುವ ಮತ್ತು ವಿಟರಿಂದ ಆಗುತ್ತಿರುವ ಹಿಂಸೆಯನ್ನು ಎದುರಿಸುವ ಅವಕಾಶ ದೊರೆಯುತ್ತದೆ.
೩. ಅವರ ಹಿನ್ನೆಲೆಯನ್ನು ಗಮನಿಸಿ ಈ ಕೆಲಸದಿಂದ ದೂರ ಮಾಡಿ ಬೇರೆ ಕೆಲಸ ಕೊಡಿಸುವ ಅಥವಾ ಬೇರೆ ಬಗೆಉ ಒಳ್ಳೆಯ ಬದುಕು ಕಟ್ಟಿಕೊಳ್ಳುವಂತೆ ಸಹಾಯ ಮಾಡಲು ಸಮಾಜಸೇವಾ ಸಂಸ್ಥೆಗಳಿಗೆ ದಾರಿ ಮುಕ್ತವಾಗುತ್ತದೆ.
೪. ಹಿಂದು ಮುಂದಿಲ್ಲದೇ ಬಂದು ಈ ಕೂಪಕ್ಕೆ ಬೀಳುವುದನ್ನು ತಪ್ಪಿಸಬಹುದು.
೫. ಕಾನೂನಿನ ಕಣ್ಣು ತಪ್ಪಿಸಿ ಯಾರಾದರೂ ಈ ದಂದೆ ನಡೆಸಲು ಹೊರಟರೆ ಪರವಾನಿಗಿ ಪಡೆದವರೇ ಸುಳುಹು ಕೊಡುತ್ತಾರೆ, ಮತ್ತು ಅಂತಹ ಕಡೆ ಹೋಗಲು ವಿಟರೂ ಹಿಂಜರಿಯುತ್ತಾರೆ.
೬. ಈ ಕೆಲಸದಲ್ಲಿ ತೊಡಗಿಸಿಕೊಂಡಿರುವವರ ಆರೋಗ್ಯವನ್ನು ಅಗಾಗ ತಪಾಸಣೆ ನಡೆಸುವ ವ್ಯವಸ್ಥೆ ಮಾಡಬಹುದು.
೭. ಎಲ್ಲಕ್ಕಿಂತ ಮಿಗಿಲಾಗಿ ಅಸಾಹಯಕತೆಯಿಂದ ಹಿಂಸೆಗೆ ಒಳಗಾಗುವುದನ್ನು ಮತ್ತು ಒಲ್ಲದ ಮನಸ್ಸಿನಿಂದ ಈ ಕೆಲಸಕ್ಕೆ ಇಳಿಯುವುದನ್ನು ತಪ್ಪಿಸಬಹುದು.

ಕೊನೆಯದಾಗಿ ಹೇಳುವುದೇನೆಂದರೆ ವೇಶ್ಯಾವಾಟಿಕೆಯನ್ನು ಸಂಪೂರ್ಣ ತೆಗೆದು ಹಾಕಲು ಇನ್ನು ಸಾವಿರ ವರ್ಷ ಹೋದರೂ ಸಾಧ್ಯವಿಲ್ಲ. ಒಂದು ವೇಳೆ ಹಾಗೆ ಮಾಡಿದರೂ ಅದರಿಂದ ಅತ್ಯಾಚಾರಗಳು ಅಧಿಕವಾಗುವ ಅಪಾಯ ಇದ್ದೇ ಇದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...