ವಿಷಯಕ್ಕೆ ಹೋಗಿ

ಅಂದಿನ ಸಮುದ್ರ ಇಂದಿನ ಮರಳುಗಾಡು !


ಮರಳುಗಾಡಲ್ಲಿ ಯಾಕೆ ಬೋಟ್‌ಗಳು ನಿಂತಿವೆ ಅಂತ ಚಕಿತರಾಗಬೇಡಿ. ಕೇವಲ ಆರೇಳು ದಶಕದ ಹಿಂದೆ ಇದು ಒಂದು ಚಿಕ್ಕ ಸಮಸ್ರವಾಗಿತ್ತು ಮತ್ತು ಈ ಜಾಗದಲ್ಲಿ ೨೦೦ ಮೀಟರಿಗೂ ಹೆಚ್ಚು ಎತ್ತರ ನೀರು ನಿಂತಿತ್ತು. ಆದರೆ ಇಂದು ಎಲ್ಲವೂ ಬತ್ತಿ ಬರಡಾಗಿ ಸಮಸ್ರವಿದ್ದ ಜಾಗ ಮರಳುಗಾಡಾಗಿದೆ. ಈ ಸಮುದ್ರದ ಹೆಸರು "Aral Sea" ಎಂದು. ಕಜಕಿಸ್ತಾನ್‌ ದೇಶದಲ್ಲಿದೆ. ಒಂದು ಸಮಯದಲ್ಲಿ ಇದರಿಂದ ವರ್ಷಕ್ಕೆ ೫೦,೦೦೦ ಟನ್‌ಗಳಷ್ಟು ಮೀನು ಸಿಗುತ್ತಿತ್ತಂತೆ ! ಆದರೆ ಈಗ ಹೀಗೆ ಬರಡು ಬೂಮಿಯನ್ನಾಗಿಸಿದ್ದು ಮಾತ್ರ ಮನುಷ್ಯ.

ನದಿಗಳನ್ನು ತಿರುಗಿಸಿ, ಈ ಸಮುದ್ರದಿಂದಲೂ ನೀರನ್ನೆತ್ತಿ ಕೃಷಿಗೆ ಅಂತ ಉಪಯೋಗಿಸಲಾರಂಭಿಸಿದರು. ಅರ್ಧ ಶತಮಾನ ಕಳೆಯುವುದರಲ್ಲಿ ಸಮುದ್ರ ಮರಳುಗಾಡಾಗಿ ಬದಲಾಗಿದೆ. ಈಗ ಅಲ್ಲಿನ ಕೃಷಿಯೂ ನೀರಿಲ್ಲದೇ ಅತಂತ್ರ ಸ್ಥಿತಿಯಲ್ಲಿದೆ. ಅಂದಿನ ಸೋವಿತ್‌ ಯೂನಿಯನ್‌ ಸರ್ಕಾರ ಮಾಡಿದ ಎಡವಟ್ಟಿನಿಂದ ಪ್ರಕೃತಿಗೆ ಅತಿ ದೋಡ್ಡ ಹೊಡೆತ ಬಿದ್ದಿದೆ.

ಹಾಗೆಯೇ ಈಗ ನಮ್ಮ ಯೂನಿಯನ್‌ ಸರ್ಕಾರ ಸಹ "ಗಂಗಾ ಕಲ್ಯಾಣ" "ಗಂಗಾ ಕಾವೇರಿ" ಎಂಬ ಏನೇನೋ ಯೋಜನೆಗಳ ಬಗ್ಗೆ ಮಾತಾಡುತ್ತಿದೆ. ಗಂಗಾ ನದಿಯನ್ನು ತಿರುಗಿಸಿ ದೇಶವನ್ನು ಉದ್ದಾರ ಮಾಡ್ತೀವಿ ಅಂತಿದ್ದಾರೆ. ಆದರೆ ಮುಂದಿನ ಪರಿಣಾಮ ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಕಾರ್ಗಿಲ್ ಕಥೆ : ಸೈನಿಕನೆಂದರೆ

"ನಿನಗೇನಾದರೂ ಪೆಟ್ಟಾಯಿತೆ?" ಎಂದು ಕೇಳಿದನು ಮಹರ್ಷಿ. ನಾನು ನನ್ನ ಕೈ ಮೈಯನ್ನು ನೋಡಿಕೊಂಡೆ. ಮುಂಗೈಗೆ ಒಂದು ಮೊನಚು ಕಲ್ಲು ಹೊಡೆದು ಅರ್ಧ ಇಂಚಿನಷ್ಟು ಅಳಕ್ಕೆ ಗಾಯವಾಗಿತ್ತು. ರಕ್ತದ ಹನಿಗಳು ಪಟಪಟನೆ ಸುರಿಯುತ್ತಿದ್ದವು. ಅದನ್ನು ಕಂಡ ಅವನು  ತನ್ನಲ್ಲಿದ್ದ ಹತ್ತಿಯನ್ನು ಗಾಯದ ಮೇಲಿಟ್ಟು ಕರವಸ್ತ್ರದಿಂದ ಗಟ್ಟಿಯಾಗಿ ಕಟ್ಟು ಹಾಕಿದನು. ಮತ್ತೆ ನಮ್ಮ ನಮ್ಮ ಬಂದೂಕುಗಳನ್ನು ಎತ್ತಿಕೊಂಡೆವು! ಶತ್ರು ಪಡೆಗಳ ಸೆಲ್‌ಗಳೂ ಅವರ ಗನ್‌ಗಳ ಗುಂಡುಗಳೂ ಅಲ್ಲಲ್ಲಿ ಬಿದ್ದು ಸಿಡಿಯುತ್ತಿದ್ದವು. ನಾವಿಬ್ಬರೂ ಈಗ ಆ ದೊಡ್ಡ ಬಂಡೆಯ ಹಿಂದೆ ರಕ್ಷಣೆ ಪಡೆದಿದ್ದೆವು. ಮತ್ತೆ ಕೇಳಿದನು ಮಹರ್ಷಿ...... ``ಈಗೇನು ಮಾಡೋಣ?" ``ಇರು... ನಮ್ಮವರು ಬಂದು ನಮ್ಮನ್ನು ಸೇರಿಕೊಳ್ಳಲಿ. ಇದೀಗ ನಾವು ಆಯಕಟ್ಟಿನ ಸ್ಥಳಕ್ಕೆ ಬಂದಾಗಿದೆ... ಇನ್ನೇನಿದ್ದರೂ ಮುಖಾಮುಖಿ" ಎಂದೆ. ``ಇದು ನಮಗೆ ಎಷ್ಟನೇ ಮುಖಾಮುಖಿ? ಅವನ ಬೆನ್ನು ತಟ್ಟಿ ಹೇಳಿದೆ ``ಮೂರನೆಯದು" ``ಈ ಕುನ್ನಿಗಳಿಂದ ನಮ್ಮನ್ನೇನು ಮಾಡಲು ಸಾಧ್ಯವಿಲ್ಲ ಅಲ್ಲವಾ?" ಎನ್ನುತ್ತ ಅವನು ನನ್ನ ಕೈ ಕುಲಕಿದ್ದನು. ಆದರೆ ನನ್ನ ಮನಸ್ಸು ಮಾತ್ರ ಹಿಂದೆ ಓಡುತ್ತಿತ್ತು. *  *  *  ಒಂದೇ ಊರಿನಲ್ಲಿ ಹುಟ್ಟಿ ಬೆಳೆದ ನಮಗೆ ಊರಿನ ಜನರಲ್ಲಿ ಗೆಳೆಯರು ಎಂಬುದಕ್ಕಿಂತ ಅಣ್ಣ ತಮ್ಮಂದಿರೆಂಬ ಪರ್ಯಾಯ ಸಂಬಂಧವಿತ್ತು. ``ಮನು ಮಹರ್ಷಿಯರು ಅಗಲಿದ್ದುದನ್ನು ನಾವೆಂದೂ ನೋಡೇ ಇಲ್ಲ" ಎಂದು ಊರ ಜ...