ವಿಷಯಕ್ಕೆ ಹೋಗಿ

ರಾಜ್ ವಿಷ್ಣು ನಡುವೆ ತಡೆಯಾಗಿ ನಿಂತವರು ಯಾರು ?


ವಿಷ್ಣುವರ್ಧನ್ ಮತ್ತು ಸುಹಾಸಿನಿ ಅವರ ಅಮೋಘ ನಟನೆಯ ಮುತ್ತಿನ ಹಾರ ಚಿತ್ರದಲ್ಲಿ ಒಂದು ಹಾಡು ಬರುತ್ತದೆ, "ದೇವರು ಹೊಸೆದಾ ಪ್ರೇಮದ ದಾರಾ..." ಅಂತ. ನನಗೆ ಈ ಹಾಡನ್ನು ಕೇಳುವಗೆಲ್ಲ ಅನ್ನಿಸೋದು, ಇದನ್ನು ಅಣ್ಣೋರು ಹಾಡಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಅಂತ. ಬಾಲ ಮುರುಳಿ ಕೃಷ್ಣ ಅವರು ಹಾಡಿದ್ದು ಚೆನ್ನಾಗಿದೆ ಆದರೂ ಅದನ್ನು ರಾಜ್ ರಿಂದ ಹಾಡಿಸಿದ್ದರೆ ಕನ್ನಡದಲ್ಲಿ ಮತ್ತೊಂದು ಅಪೂರ್ವ ಸಂಗಮ ಆದಂತೆ ಇರುತ್ತಿತ್ತು.

ಅದಾಗಲೇ ರಾಜ್ ಬೇರೆ ನಾಯಕರಿಗೆ ಆಗೊಂದು ಈಗೊಂದು ಹಾಡುಗಳನ್ನು ಹಾಡುತ್ತ ಇದ್ದರು. ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಪ್ರಜಾವಾಣಿ ಯಲ್ಲಿ ಆ ಚಿತ್ರದ ನಿರ್ಮಾಣದ ಬಗ್ಗೆ ಬರೆದಿದ್ದರು, ಅದರಲ್ಲಿ ಕಷ್ಟ ಪಟ್ಟು ಹೈದರಾಬಾದ್ ಹೋಗಿ ಬಾಲ ಮುರುಳಿ ಕೃಷ್ಣ ಅವರ ಹತ್ತಿರ ಹಾಡಿಸಿದೆವು ಅಂತ ಬರೆದಿದ್ದರು. ಆದರೆ ಎಲ್ಲಿಯೂ ರಾಜ್ ರಿಂದ ಅದನ್ನು ಹಾಡಿಸಬಹುದೇ ಎಂಬುದರ ಬಗ್ಗೆ ಯೋಚಿಸಿದ ಪ್ರಸ್ತಾಪವೇ ಇರಲಿಲ್ಲ! ಯಾಕೆ ಅಷ್ಟು ದೊಡ್ಡ ನಿರ್ದೇಶಕರಿಗೆ ಅಂತಹ ಯೋಚನೆ ಬರಲಿಲ್ಲ ಅಂತ ಆಶ್ಚರ್ಯ ಆಗುತ್ತದೆ. ಒಂದು ವೇಳೆ ಬಾಬು ಮತ್ತು ವಿಷ್ಣು ಇಬ್ಬರೂ ಹೋಗಿ ರಾಜ್ ರಲ್ಲಿ ಕೇಳಿಕೊಂಡಿದ್ದರೆ ರಾಜ್ ಹಾಡಲು ಒಪ್ಪದೇ ಇರುತ್ತಿರಲಿಲ್ಲ. ಸಂಗೀತ ನಿರ್ದೇಶಕ ಹಂಸಲೇಖ ಕೂಡ ಅದಾಗಲೇ ರಾಜ್ ಬ್ಯಾನರ್ ನಲ್ಲಿ ಗುರುತಿಸಿಕೊಂಡಿದ್ದರು. ಆದರೆ ನಿರ್ದೇಶಕರು ಅಂತಹ ಪ್ರಯತ್ನವನ್ನೇ ಮಾಡಲಿಲ್ಲ.

ಡಾ. ರಾಜ್ ಮತ್ತೆ ವಿಷ್ಣುವರ್ಧನ್ ಗಂಧದಗುಡಿಯ ನಂತರ ಮತ್ತೆ ಒಂದಾಗದಂತೆ ತಡೆದಿದ್ದು ಯಾರು ? ಸ್ವತಃ ಅವರಿಬ್ಬರ ನಡುವೆ ಯಾವುದೇ ವೈಮನಸ್ಯ ಇದ್ದ ಬಗ್ಗೆ ಮಾಹಿತಿ ಇಲ್ಲ, ಇಬ್ಬರೂ ಎಲ್ಲಿಯೂ ಆ ರೀತಿ ಹೇಳಿದ್ದಾಗಲಿ, ನಡೆದುಕೊಂಡಿದ್ದಾಗಲಿ ದಾಖಲೆ ಇಲ್ಲ. ಹಾಗಿದ್ದರೆ ಇಬ್ಬರ ನಡುವೆ ತಡೆಯಾಗಿ ನಿಂತವರು ಯಾರು ? ಎಂದೆಲ್ಲ ಯೋಚಿಸಿದರೆ ಸಿಗುವ ಉತ್ತರ ಇವರಿಬ್ಬರ ಸುತ್ತ ಮುತ್ತ ಇದ್ದವರೇ ಅನ್ನೋದು ಆಗಿರುತ್ತದೆ. ಒಟ್ಟಿನಲ್ಲಿ ಯಾರು ಯಾರದೋ ಚಿತಾವಣೆಗೆ ಇಬ್ಬರು ಮಹಾನ್ ನಟರು ದೂರವೇ ಇದ್ದು ಬಿಡಬೇಕಾಯ್ತು ಅನ್ನಿಸುತ್ತೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...