ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

2020 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹೊಸ ಕೃಷಿ ಕಾಯ್ದೆಯ ಬಗ್ಗೆ ಕೆಲವು ವಿವರಣೆಗಳು

ಹೊಸ ಕೃಷಿ ಕಾಯ್ದೆಯ ಬಗ್ಗೆ ಕೆಲವು ವಿವರಣೆಗಳು: ಅದಾನಿ, ಅಂಬಾನಿ ಮತ್ತು ಇತರ ಕಾರ್ಪೊರೇಟ್‌ಗಳು ಭಾರತದ ಬೃಹತ್ ಆಹಾರ ಧಾನ್ಯ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿದ್ದರು. ಆದರೆ ರೈತರ ಹೊಲಕ್ಕೆ ಲಗ್ಗೆ ಹಾಕಲು ಅವರಿಗೆ ಕೆಲವು ತಡೆಗಳು ಇದ್ದವು: ತಡೆ 1: ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಲು ಬೇರೆ ಬೇರೆ ರಾಜ್ಯಗಳು ಬೇರೆ ಬೇರೆ ಕಟ್ಟಳೆ ಮತ್ತು ಕಾನೂನುಗಳನ್ನು ಹೊಂದಿದ್ದವು.  ಕಾರ್ಪೊರೇಟ್‌ಗಳು ಹಲವು ವಿಭಿನ್ನ ನಿಯಮಗಳು ಮತ್ತು ತೆರಿಗೆಗಳನ್ನು ಹೊಂದಿರುವ ಅನೇಕ ರಾಜ್ಯಗಳನ್ನು ನಿರ್ವಹಿಸುವುದು ಕಷ್ಟಕರವಾಗಿತ್ತು. ಮೋದಿ ಕೊಟ್ಟ ಪರಿಹಾರ: ರಾಜ್ಯಗಳಿಂದ ನಿಯಂತ್ರಣವನ್ನು ತೆಗೆದುಕೊಂಡು ಇಡೀ ದೇಶಕ್ಕೆ 1 ಕಾಯ್ದೆ ಮಾಡಿದೆ.  ಕಾರ್ಪೊರೇಟ್‌ಗಳು ಈಗ ಸಂತೋಷವಾಗಿದ್ದಾರೆ. ತಡೆ 2: ಕಾರ್ಪೊರೇಟ್‌ಗಳು ಬೆಳೆಗಳನ್ನು ಖರೀದಿಸಿ ಸಂಗ್ರಹಿಸಿ ಆ ಮೂಲಕ ಬೆಲೆಗಳು ಏರುವಂತೆ ಮಾಡಿ ಆಮೇಲೆ ಮಾರಾಟ ಮಾಡುವ ಹೊಂಚು ಹಾಕಿದ್ದವು.  ಆದರೆ ಎಸೆನ್ಷಿಯಲ್ ಕಮೊಡಿಟಿ ಆಕ್ಟ್ ಮಾರುಕಟ್ಟೆಯಲ್ಲಿ ಬೆಲೆಗಳನ್ನು ಹೆಚ್ಚಿಸುವುದರಿಂದ ದೀರ್ಘಕಾಲದವರೆಗೆ ಬೆಳೆಗಳನ್ನು ಸಂಗ್ರಹಿಸುವುದನ್ನು ನಿರ್ಬಂಧಿಸಿತ್ತು. ಮೋದಿ ಕೊಟ್ಟ ಪರಿಹಾರ: ಆಹಾರ ಬೆಳೆಗಳು ಅಗತ್ಯ ಸರಕು ಕಾಯ್ದೆಯಡಿ ಬರುವುದಿಲ್ಲ ಮತ್ತು ಅದನ್ನು ದೀರ್ಘಕಾಲದವರೆಗೆ ಸಂಗ್ರಹಿಸಬಹುದು.  ಕಾರ್ಪೊರೇಟ್‌ಗಳು ಮತ್ತೆ ಸಂತೋಷಗೊಂಡಿದ್ದಾರೆ. ತಡೆ 3: ರೈತರು ಯಾವ ರೀತಿಯ ಬೆಳೆ ಬೆಳೆಯುತ್ತಾರೆ ಎಂದು ನಿರ್ಣಯಿಸುವ

ಹಿಂದಿಯೇತರರ ಮೇಲೆ ಇಂಡಿಯಾ ಹೂಡಿರುವ ಯುದ್ದ!

ಇಂಡಿಯಾ ಒಕ್ಕೂಟ 1947 ರಿಂದಲೂ ಒಂದು ಯುದ್ಧವನ್ನು ಮಾಡುತ್ತಾ ಬಂದಿದೆ! ಅದು ಪರೋಕ್ಷ ಯುದ್ದ. ಯಾರ ಮೇಲೆ ಅಂದರೆ 'ತನ್ನದೇ ಪ್ರಜೆಗಳು' ಅಂತ ನಂಬಿಸಲಾಗಿರುವ ಹಿಂದಿಯೇತರ ಜನರ ಮೇಲೆ! ಹಿಂದಿಯೇತರ ನುಡಿಗಳ ನಾಶ ಮತ್ತು ಆ ಜನರ ಸ್ವಾತಂತ್ರ್ಯ ಹರಣ ಈ ಯುದ್ಧದ ಉದ್ದೇಶ. ಇದು ಚೀನಾ ದೇಶವು ಮುಸ್ಲಿಮರ ಅಸ್ತಿತ್ವವನ್ನು ಹೊಸಕಿ ಹಾಕುತ್ತಿರುವಷ್ಟೇ ಕ್ರೌರ್ಯದ ಕೆಲಸ.  ಇದನ್ನು ಯಾರು ಶುರು ಮಾಡಿದರು ಅಂತ ನೋಡಲು ಹೋದರೆ ಗಾಂಧಿ, ನೆಹರು, ಅಂಬೇಡ್ಕರ್ ಮುಂತಾದ ದೊಡ್ಡ ದೊಡ್ಡ ಹೆಸರುಗಳೇ ಮುಂದೆ ಬರುತ್ತವೆ. ಜಾತಿ ಸಮಾನತೆಗೆ ಅಷ್ಟು ಮಹತ್ವ ಕೊಟ್ಟ ಅದೇ ಅಂಬೇಡ್ಕರ್ ನುಡಿ ಸಮಾನತೆಯನ್ನು ಮಾತ್ರ ಕಡೆಗಣಿಸಿದ್ದು ಆಘಾತ ಉಂಟುಮಾಡುವ ವಿಷಯ. ಒಕ್ಕೂಟ ರಚನೆಯಾದ ಹೊಸದರಲ್ಲಿ 'ಒಂದಾಗುವಿಕೆ'ಗಾಗಿ ಹಾಗೆ ಮಾಡಲಾಯ್ತು ಅಂತ ತೇಪೆ ಹಾಕಬಹುದು ಅಷ್ಟೇ. ತಮಾಷೆ ಅಂದರೆ ಡಿಎಂಕೆ ಬಿಟ್ಟರೆ ಯಾವುದೇ ರಾಜ್ಯದ ಪ್ರಾದೇಶಿಕ ಪಕ್ಷಗಳುಇ ಇದರ ಬಗ್ಗೆ ದನಿ ಎತ್ತುತಿಲ್ಲ! ಆದರೆ ಅಲ್ಲಿಂದ ಶುರುವಾದ ನಮ್ಮ ಸ್ವಾತಂತ್ರ್ಯ ಹರಣದ ಕೆಲಸ ಇಂದೂ ನಿಂತಿಲ್ಲ, ಬಿಜೆಪಿ ಆಡಳಿತದಲ್ಲಿ ಅದು ಇನ್ನಷ್ಟು ವೇಗವನ್ನು ಪಡೆದುಕೊಂಡಿದೆ. ಇದನ್ನು ತಡೆಯುವುದು ಹೇಗೆ? ನಮ್ಮ ನುಡಿಯ ಜೊತೆಗೆ ನಮ್ಮತನವನ್ನು ಉಳಿಸಿಕೊಳ್ಳುವುದು ಹೇಗೆ?  ಮೊದಲಿಗೆ ಈ ಹಿಂದಿ ಒಕ್ಕೂಟದ ಹುನ್ನಾರವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ದೇಶ ಅನ್ನುವುದು ಒಂದು ಬೋಗಸ್ ಬಣ್ಣ, ಇದರ ಹಿಂದೆ ಇರುವುದು