ವಿಷಯಕ್ಕೆ ಹೋಗಿ

ಹಿಂದಿಯೇತರರ ಮೇಲೆ ಇಂಡಿಯಾ ಹೂಡಿರುವ ಯುದ್ದ!

ಇಂಡಿಯಾ ಒಕ್ಕೂಟ 1947 ರಿಂದಲೂ ಒಂದು ಯುದ್ಧವನ್ನು ಮಾಡುತ್ತಾ ಬಂದಿದೆ! ಅದು ಪರೋಕ್ಷ ಯುದ್ದ. ಯಾರ ಮೇಲೆ ಅಂದರೆ 'ತನ್ನದೇ ಪ್ರಜೆಗಳು' ಅಂತ ನಂಬಿಸಲಾಗಿರುವ ಹಿಂದಿಯೇತರ ಜನರ ಮೇಲೆ! ಹಿಂದಿಯೇತರ ನುಡಿಗಳ ನಾಶ ಮತ್ತು ಆ ಜನರ ಸ್ವಾತಂತ್ರ್ಯ ಹರಣ ಈ ಯುದ್ಧದ ಉದ್ದೇಶ. ಇದು ಚೀನಾ ದೇಶವು ಮುಸ್ಲಿಮರ ಅಸ್ತಿತ್ವವನ್ನು ಹೊಸಕಿ ಹಾಕುತ್ತಿರುವಷ್ಟೇ ಕ್ರೌರ್ಯದ ಕೆಲಸ. 
ಇದನ್ನು ಯಾರು ಶುರು ಮಾಡಿದರು ಅಂತ ನೋಡಲು ಹೋದರೆ ಗಾಂಧಿ, ನೆಹರು, ಅಂಬೇಡ್ಕರ್ ಮುಂತಾದ ದೊಡ್ಡ ದೊಡ್ಡ ಹೆಸರುಗಳೇ ಮುಂದೆ ಬರುತ್ತವೆ. ಜಾತಿ ಸಮಾನತೆಗೆ ಅಷ್ಟು ಮಹತ್ವ ಕೊಟ್ಟ ಅದೇ ಅಂಬೇಡ್ಕರ್ ನುಡಿ ಸಮಾನತೆಯನ್ನು ಮಾತ್ರ ಕಡೆಗಣಿಸಿದ್ದು ಆಘಾತ ಉಂಟುಮಾಡುವ ವಿಷಯ. ಒಕ್ಕೂಟ ರಚನೆಯಾದ ಹೊಸದರಲ್ಲಿ 'ಒಂದಾಗುವಿಕೆ'ಗಾಗಿ ಹಾಗೆ ಮಾಡಲಾಯ್ತು ಅಂತ ತೇಪೆ ಹಾಕಬಹುದು ಅಷ್ಟೇ. ತಮಾಷೆ ಅಂದರೆ ಡಿಎಂಕೆ ಬಿಟ್ಟರೆ ಯಾವುದೇ ರಾಜ್ಯದ ಪ್ರಾದೇಶಿಕ ಪಕ್ಷಗಳುಇ ಇದರ ಬಗ್ಗೆ ದನಿ ಎತ್ತುತಿಲ್ಲ!
ಆದರೆ ಅಲ್ಲಿಂದ ಶುರುವಾದ ನಮ್ಮ ಸ್ವಾತಂತ್ರ್ಯ ಹರಣದ ಕೆಲಸ ಇಂದೂ ನಿಂತಿಲ್ಲ, ಬಿಜೆಪಿ ಆಡಳಿತದಲ್ಲಿ ಅದು ಇನ್ನಷ್ಟು ವೇಗವನ್ನು ಪಡೆದುಕೊಂಡಿದೆ. ಇದನ್ನು ತಡೆಯುವುದು ಹೇಗೆ? ನಮ್ಮ ನುಡಿಯ ಜೊತೆಗೆ ನಮ್ಮತನವನ್ನು ಉಳಿಸಿಕೊಳ್ಳುವುದು ಹೇಗೆ? 
ಮೊದಲಿಗೆ ಈ ಹಿಂದಿ ಒಕ್ಕೂಟದ ಹುನ್ನಾರವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ದೇಶ ಅನ್ನುವುದು ಒಂದು ಬೋಗಸ್ ಬಣ್ಣ, ಇದರ ಹಿಂದೆ ಇರುವುದು ಹಿಂದಿ ತೋಳ ಅಷ್ಟೇ. ಎಲ್ಲರೂ ಪ್ಲಾನ್ ಮಾಡಿ ನಮ್ಮನ್ನು ಒಂದು ಕೆಡ್ಡದೊಳಗೆ ಬೀಳಿಸಿಕೊಂಡಿದ್ದಾರೆ. ಇದರಿಂದ ಹೊರ ಬರುವ ದಾರಿಯನ್ನು ಹುಡುಕದೆ ಹೋದರೆ ನಾವು ಮತ್ತು ನಮ್ಮ ಮುಂದಿನ ಪೀಳಿಗೆ ಅಸ್ತಿತ್ವ ಕಳೆದುಕೊಂಡ ಜೀತದಾಳುಗಳಾಗಿ ಬದುಕಬೇಕಾಗುತ್ತೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ನಿರ್ಜೀವ ವಸ್ತುಗಳಿಂದ ಜೀವಕೋಶದ ರಚನೆ...

ಜೀವಿಗಳ ಉಗಮ ಆಕಸ್ಮಿಕವಾದುದು ಎಂಬ ವಿಜ್ಞಾನಿಗಳ ಹೇಳಿಕೆಗೆ ಈಗಾಗಲೇ ಸಾವಿರಾರು ಪುರಾವೆಗಳು ಸಿಕ್ಕಿವೆ. ಅವುಗಳಲ್ಲಿ ಪ್ರಮುಖವಾದುದು ಜೀವಕೋಶಗಳ ರಚನೆ ಆಗುತ್ತಿರುವು ಮುಖ್ಯವಾಗಿ ಕೇವಲ ಐದು ಮೂಲ ವಸ್ತುಗಳಿಂದ. ಅವುಗಳೆಂದರೆ .. ೧. ಹೈಡ್ರೋಜನ್‌ ೨. ಆಕ್ಸಿಜನ್‌ ೩. ಕಾರ್ಬನ್‌ ೪. ನೈಟ್ರೋಜನ್‌ ೫. ಕ್ಯಾಲ್ಸಿಯಂ ಈ ಐದು ಮೂಲ ವಸ್ತುಗಳೇ ನಮ್ಮ ದೇಹದ ೯೯% ಭಾಗವನ್ನು ಆವರಿಸಿಕೊಂಡಿರುವುದು. ಇದನ್ನು ಹೇಳಿದ ಕೂಡಲೇ ಆಸ್ತಕರು ತಕ್ಷಣ "ಹಾಗಿದ್ದರೆ ಈ ವಸ್ತುಗಳನ್ನು ಕೊಡುತ್ತೇನೆ, ಜೀವಿಯೊಂದನ್ನು ಮಾಡಿ ಕೊಡಿ ನೋಡುವ" ಅನ್ನುವ ಸವಾಲನ್ನು ಒಡ್ಡುತ್ತಾರೆ. ಆ ಸವಾಲನ್ನು ವಿಜ್ಞಾನಿಗಳು ಈಗಾಗಲೇ ಸ್ವೀಕರಿಸಿದ್ದಾರೆ, ಮತ್ತು ನಿರ್ಜೀವ ವಸ್ತುಗಳಿಂದ ಜೀವಕೋಶವನ್ನು ಸೃಷ್ಟಿಸಲು ಹೆಣಗುತ್ತಿದ್ದಾರೆ.  ಮೇಲೆ ತಿಳಿಸಿದ ಮೂಲವಸ್ತುಗಳ ಯಾವುದೋ ಒಂದು ವಿಶಿಷ್ಟ ಮಿಶ್ರಣದಲ್ಲೇ ಜೀವಿಗಳ ಉದಯ ಆಯ್ತು ಅನ್ನುವುದುವಿಜ್ಞಾನಿಗಳ ಬಲವಾದ ನಂಬಿಕೆ. ಏಕೆಂದರೆ ಮೇಲ್ಕಾಣಿಸಿದ ಎಲ್ಲಾ ಐದೂ ವಸ್ತುಗಳೂ ಸಹ ಜ್ವಾಲಾಮುಖಿಯ ಲಾವಾರಸ ನೀರಿನೊಂದಿಗೆ ಬೆರೆಯುವ ಸ್ಥಳದಲ್ಲಿ ಹೆಚ್ಚಾಗಿ ಇರುವುದನ್ನು ಕಾಣಬಹುದು. ಆ ಜಾಗವು ಒಂದು ವಿಶಿಷ್ಟ ರಾಸಾಯನಿಕ ಕ್ರಿಯೆಯನ್ನು ನಡೆಸುತ್ತಾ ಇರುತ್ತದೆ. ಇಂತಹ ಸಮಯದಲ್ಲೇ ಜೀವಿಯ ಉಗಮ ಆಗಿರುವ ಸಾಧ್ಯತೆ ಬಲವಾಗಿದೆ. ಏಕೆಂದರೆ ಭೂಮಿಯು ರಚನೆಗೊಂಡು ತಂಪಾಗುತ್ತಿದ್ದ ಸಮಯದಲ್ಲಿ ಕೂಡಾ ಇದೇ ತೆರನಾದ ಸ್ಥಿತಿಯು ಲಕ್ಷಾಂತರ ವರ್ಷಗಳ ವರೆಗೆ ಮುಂದ...