ವಿಷಯಕ್ಕೆ ಹೋಗಿ

ಹೊಸ ಕೃಷಿ ಕಾಯ್ದೆಯ ಬಗ್ಗೆ ಕೆಲವು ವಿವರಣೆಗಳು

ಹೊಸ ಕೃಷಿ ಕಾಯ್ದೆಯ ಬಗ್ಗೆ ಕೆಲವು ವಿವರಣೆಗಳು:

ಅದಾನಿ, ಅಂಬಾನಿ ಮತ್ತು ಇತರ ಕಾರ್ಪೊರೇಟ್‌ಗಳು ಭಾರತದ ಬೃಹತ್ ಆಹಾರ ಧಾನ್ಯ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿದ್ದರು. ಆದರೆ ರೈತರ ಹೊಲಕ್ಕೆ ಲಗ್ಗೆ ಹಾಕಲು ಅವರಿಗೆ ಕೆಲವು ತಡೆಗಳು ಇದ್ದವು:

ತಡೆ 1:
ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಲು ಬೇರೆ ಬೇರೆ ರಾಜ್ಯಗಳು ಬೇರೆ ಬೇರೆ ಕಟ್ಟಳೆ ಮತ್ತು ಕಾನೂನುಗಳನ್ನು ಹೊಂದಿದ್ದವು.  ಕಾರ್ಪೊರೇಟ್‌ಗಳು ಹಲವು ವಿಭಿನ್ನ ನಿಯಮಗಳು ಮತ್ತು ತೆರಿಗೆಗಳನ್ನು ಹೊಂದಿರುವ ಅನೇಕ ರಾಜ್ಯಗಳನ್ನು ನಿರ್ವಹಿಸುವುದು ಕಷ್ಟಕರವಾಗಿತ್ತು.

ಮೋದಿ ಕೊಟ್ಟ ಪರಿಹಾರ:
ರಾಜ್ಯಗಳಿಂದ ನಿಯಂತ್ರಣವನ್ನು ತೆಗೆದುಕೊಂಡು ಇಡೀ ದೇಶಕ್ಕೆ 1 ಕಾಯ್ದೆ ಮಾಡಿದೆ.  ಕಾರ್ಪೊರೇಟ್‌ಗಳು ಈಗ ಸಂತೋಷವಾಗಿದ್ದಾರೆ.

ತಡೆ 2:
ಕಾರ್ಪೊರೇಟ್‌ಗಳು ಬೆಳೆಗಳನ್ನು ಖರೀದಿಸಿ ಸಂಗ್ರಹಿಸಿ ಆ ಮೂಲಕ ಬೆಲೆಗಳು ಏರುವಂತೆ ಮಾಡಿ ಆಮೇಲೆ ಮಾರಾಟ ಮಾಡುವ ಹೊಂಚು ಹಾಕಿದ್ದವು.  ಆದರೆ ಎಸೆನ್ಷಿಯಲ್ ಕಮೊಡಿಟಿ ಆಕ್ಟ್ ಮಾರುಕಟ್ಟೆಯಲ್ಲಿ ಬೆಲೆಗಳನ್ನು ಹೆಚ್ಚಿಸುವುದರಿಂದ ದೀರ್ಘಕಾಲದವರೆಗೆ ಬೆಳೆಗಳನ್ನು ಸಂಗ್ರಹಿಸುವುದನ್ನು ನಿರ್ಬಂಧಿಸಿತ್ತು.

ಮೋದಿ ಕೊಟ್ಟ ಪರಿಹಾರ:
ಆಹಾರ ಬೆಳೆಗಳು ಅಗತ್ಯ ಸರಕು ಕಾಯ್ದೆಯಡಿ ಬರುವುದಿಲ್ಲ ಮತ್ತು ಅದನ್ನು ದೀರ್ಘಕಾಲದವರೆಗೆ ಸಂಗ್ರಹಿಸಬಹುದು.  ಕಾರ್ಪೊರೇಟ್‌ಗಳು ಮತ್ತೆ ಸಂತೋಷಗೊಂಡಿದ್ದಾರೆ.

ತಡೆ 3:
ರೈತರು ಯಾವ ರೀತಿಯ ಬೆಳೆ ಬೆಳೆಯುತ್ತಾರೆ ಎಂದು ನಿರ್ಣಯಿಸುವ ಅಧಿಕಾರ ಕಾರ್ಪೊರೇಟ್ ಗಳಿಗೆ ಇರಲಿಲ್ಲ. ರೈತ ತನಗೆ ಬೇಕಾದ ಬೆಳೆಯನ್ನು ಬೆಳೆವ ಸ್ವಾತಂತ್ರ್ಯ ಹೊಂದಿದ್ದನು.

ಮೋದಿ ಕೊಟ್ಟ ಪರಿಹಾರ:

ಕಾರ್ಪೊರೇಟ್ ಗಳು ಇನ್ಮುಂದೆ ರೈತರೊಂದಿಗೆ ಕರಾರು/ಒಪ್ಪಂದ ಮಾಡಿಕೊಳ್ಳಲಿವೆ, ಅಲ್ಲಿ ಯಾವ ರೀತಿಯ ಬೆಳೆ ಬೆಳೆಯಬೇಕೆಂದು ಕಾರ್ಪೊರೇಟ್‌ ಗಳೇ ನಿರ್ಣಯ ಮಾಡುತ್ತವೆ!.  ಕಾರ್ಪೊರೇಟ್‌ಗಳು ಮತ್ತೆ ಸಂತೋಷಗೊಂಡಿದ್ದಾರೆ.

ತಡೆ 4:

ರೈತರ ವಿರುದ್ಧ ಏನಾದರೂ ತಪ್ಪಾದಲ್ಲಿ ಕಾರ್ಪೊರೇಟ್‌ಗಳು ನ್ಯಾಯಾಲಯದ ಪ್ರಕರಣಗಳನ್ನು ನಿರ್ವಹಿಸಲು ಕಷ್ಟ ಆಗುತ್ತಿತ್ತು.

ಮೋದಿ ನೀಡಿದ ಪರಿಹಾರ:

ರೈತರು ನ್ಯಾಯಾಲಯಗಳಿಗೆ ಹೋಗುವ ಅವಕಾಶ ತಪ್ಪಿಸಿ. ಅವರು ಎಸ್‌ಡಿಎಂ ಮತ್ತು ಡಿಸಿಗೆ ಹೋಗುವಂತೆ ಹೊಸ ಕಾಯ್ದೆ ಹೇಳುತ್ತದೆ. ಕಾರ್ಪೊರೇಟ್‌ಗಳು ಅವರಿಗೆ ಲಂಚ  ಕೊಟ್ಟು ತಮಗೆ ಬೇಕಾದಂತೆ ನಿರ್ಣಯ ಮಾಡಿಸಿಕೊಳ್ಳುವ ಸದವಕಾಶ. ಮತ್ತೊಮ್ಮೆ ಕಾರ್ಪೊರೇಟ್ ಗಳು ಬಹಳ ಅನಂದವಾಗಿವೆ!

ಒಟ್ಟಾರೆ ಹೊಸ ಕೃಷಿ ಕಾಯ್ದೆಯಿಂದಾಗಿ:
ಕಾರ್ಪೊರೇಟ್‌ಗಳಿಗೆ ಅನುಕೂಲ - 100%
ರೈತರಿಗೆ ಅನಾನುಕೂಲ - 100%

ಆದಾಗ್ಯೂ ಮೋದಿ ಮತ್ತು ಅವರ ಬೆಂಬಲಿಗರು ಹೇಳುತ್ತಾರೆ.. "ಈ ಬಿಲ್
ಬೆಳೆಗಾರರ ಪರವಾಗಿದೆ" ಎಂದು!!.  🙄🙄🙄

https://youtu.be/5kdyio7H-oo

(ಅಂಗ್ಲದಿಂದ ನುಡಿಮಾರ್ಪು)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...