ವಿಷಯಕ್ಕೆ ಹೋಗಿ

ಹೊಸ ಕೃಷಿ ಕಾಯ್ದೆಯ ಬಗ್ಗೆ ಕೆಲವು ವಿವರಣೆಗಳು

ಹೊಸ ಕೃಷಿ ಕಾಯ್ದೆಯ ಬಗ್ಗೆ ಕೆಲವು ವಿವರಣೆಗಳು:

ಅದಾನಿ, ಅಂಬಾನಿ ಮತ್ತು ಇತರ ಕಾರ್ಪೊರೇಟ್‌ಗಳು ಭಾರತದ ಬೃಹತ್ ಆಹಾರ ಧಾನ್ಯ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿದ್ದರು. ಆದರೆ ರೈತರ ಹೊಲಕ್ಕೆ ಲಗ್ಗೆ ಹಾಕಲು ಅವರಿಗೆ ಕೆಲವು ತಡೆಗಳು ಇದ್ದವು:

ತಡೆ 1:
ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸಲು ಬೇರೆ ಬೇರೆ ರಾಜ್ಯಗಳು ಬೇರೆ ಬೇರೆ ಕಟ್ಟಳೆ ಮತ್ತು ಕಾನೂನುಗಳನ್ನು ಹೊಂದಿದ್ದವು.  ಕಾರ್ಪೊರೇಟ್‌ಗಳು ಹಲವು ವಿಭಿನ್ನ ನಿಯಮಗಳು ಮತ್ತು ತೆರಿಗೆಗಳನ್ನು ಹೊಂದಿರುವ ಅನೇಕ ರಾಜ್ಯಗಳನ್ನು ನಿರ್ವಹಿಸುವುದು ಕಷ್ಟಕರವಾಗಿತ್ತು.

ಮೋದಿ ಕೊಟ್ಟ ಪರಿಹಾರ:
ರಾಜ್ಯಗಳಿಂದ ನಿಯಂತ್ರಣವನ್ನು ತೆಗೆದುಕೊಂಡು ಇಡೀ ದೇಶಕ್ಕೆ 1 ಕಾಯ್ದೆ ಮಾಡಿದೆ.  ಕಾರ್ಪೊರೇಟ್‌ಗಳು ಈಗ ಸಂತೋಷವಾಗಿದ್ದಾರೆ.

ತಡೆ 2:
ಕಾರ್ಪೊರೇಟ್‌ಗಳು ಬೆಳೆಗಳನ್ನು ಖರೀದಿಸಿ ಸಂಗ್ರಹಿಸಿ ಆ ಮೂಲಕ ಬೆಲೆಗಳು ಏರುವಂತೆ ಮಾಡಿ ಆಮೇಲೆ ಮಾರಾಟ ಮಾಡುವ ಹೊಂಚು ಹಾಕಿದ್ದವು.  ಆದರೆ ಎಸೆನ್ಷಿಯಲ್ ಕಮೊಡಿಟಿ ಆಕ್ಟ್ ಮಾರುಕಟ್ಟೆಯಲ್ಲಿ ಬೆಲೆಗಳನ್ನು ಹೆಚ್ಚಿಸುವುದರಿಂದ ದೀರ್ಘಕಾಲದವರೆಗೆ ಬೆಳೆಗಳನ್ನು ಸಂಗ್ರಹಿಸುವುದನ್ನು ನಿರ್ಬಂಧಿಸಿತ್ತು.

ಮೋದಿ ಕೊಟ್ಟ ಪರಿಹಾರ:
ಆಹಾರ ಬೆಳೆಗಳು ಅಗತ್ಯ ಸರಕು ಕಾಯ್ದೆಯಡಿ ಬರುವುದಿಲ್ಲ ಮತ್ತು ಅದನ್ನು ದೀರ್ಘಕಾಲದವರೆಗೆ ಸಂಗ್ರಹಿಸಬಹುದು.  ಕಾರ್ಪೊರೇಟ್‌ಗಳು ಮತ್ತೆ ಸಂತೋಷಗೊಂಡಿದ್ದಾರೆ.

ತಡೆ 3:
ರೈತರು ಯಾವ ರೀತಿಯ ಬೆಳೆ ಬೆಳೆಯುತ್ತಾರೆ ಎಂದು ನಿರ್ಣಯಿಸುವ ಅಧಿಕಾರ ಕಾರ್ಪೊರೇಟ್ ಗಳಿಗೆ ಇರಲಿಲ್ಲ. ರೈತ ತನಗೆ ಬೇಕಾದ ಬೆಳೆಯನ್ನು ಬೆಳೆವ ಸ್ವಾತಂತ್ರ್ಯ ಹೊಂದಿದ್ದನು.

ಮೋದಿ ಕೊಟ್ಟ ಪರಿಹಾರ:

ಕಾರ್ಪೊರೇಟ್ ಗಳು ಇನ್ಮುಂದೆ ರೈತರೊಂದಿಗೆ ಕರಾರು/ಒಪ್ಪಂದ ಮಾಡಿಕೊಳ್ಳಲಿವೆ, ಅಲ್ಲಿ ಯಾವ ರೀತಿಯ ಬೆಳೆ ಬೆಳೆಯಬೇಕೆಂದು ಕಾರ್ಪೊರೇಟ್‌ ಗಳೇ ನಿರ್ಣಯ ಮಾಡುತ್ತವೆ!.  ಕಾರ್ಪೊರೇಟ್‌ಗಳು ಮತ್ತೆ ಸಂತೋಷಗೊಂಡಿದ್ದಾರೆ.

ತಡೆ 4:

ರೈತರ ವಿರುದ್ಧ ಏನಾದರೂ ತಪ್ಪಾದಲ್ಲಿ ಕಾರ್ಪೊರೇಟ್‌ಗಳು ನ್ಯಾಯಾಲಯದ ಪ್ರಕರಣಗಳನ್ನು ನಿರ್ವಹಿಸಲು ಕಷ್ಟ ಆಗುತ್ತಿತ್ತು.

ಮೋದಿ ನೀಡಿದ ಪರಿಹಾರ:

ರೈತರು ನ್ಯಾಯಾಲಯಗಳಿಗೆ ಹೋಗುವ ಅವಕಾಶ ತಪ್ಪಿಸಿ. ಅವರು ಎಸ್‌ಡಿಎಂ ಮತ್ತು ಡಿಸಿಗೆ ಹೋಗುವಂತೆ ಹೊಸ ಕಾಯ್ದೆ ಹೇಳುತ್ತದೆ. ಕಾರ್ಪೊರೇಟ್‌ಗಳು ಅವರಿಗೆ ಲಂಚ  ಕೊಟ್ಟು ತಮಗೆ ಬೇಕಾದಂತೆ ನಿರ್ಣಯ ಮಾಡಿಸಿಕೊಳ್ಳುವ ಸದವಕಾಶ. ಮತ್ತೊಮ್ಮೆ ಕಾರ್ಪೊರೇಟ್ ಗಳು ಬಹಳ ಅನಂದವಾಗಿವೆ!

ಒಟ್ಟಾರೆ ಹೊಸ ಕೃಷಿ ಕಾಯ್ದೆಯಿಂದಾಗಿ:
ಕಾರ್ಪೊರೇಟ್‌ಗಳಿಗೆ ಅನುಕೂಲ - 100%
ರೈತರಿಗೆ ಅನಾನುಕೂಲ - 100%

ಆದಾಗ್ಯೂ ಮೋದಿ ಮತ್ತು ಅವರ ಬೆಂಬಲಿಗರು ಹೇಳುತ್ತಾರೆ.. "ಈ ಬಿಲ್
ಬೆಳೆಗಾರರ ಪರವಾಗಿದೆ" ಎಂದು!!.  🙄🙄🙄

https://youtu.be/5kdyio7H-oo

(ಅಂಗ್ಲದಿಂದ ನುಡಿಮಾರ್ಪು)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...